ನಿಂತಿಕಲ್ಲು: ಸುಳ್ಯ ತಾಲೂಕಿನಿಂದ ಬೇರ್ಪಟ್ಟು ನೂತನ ಕಡಬ ತಾಲೂಕಿಗೆ ಸೇರ್ಪಡೆಗೊಂಡ ಎಣ್ಮೂರು ಗ್ರಾಮವನ್ನು ಗ್ರಾಮ ಪಂಚಾಯತ್ ಆಗಿ ಕಡಬ ತಾಲೂಕಿನೊಳಗೆ ಉಳಿಸಬೇಕೆಂದು ಎಣ್ಮೂರು ನಾಗರೀಕರು ಕಡಬ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸುಳ್ಯ ತಾಲೂಕಿನ ಮುರುಳ್ಯ ಹಾಗು ಎಣ್ಮೂರು ಈ ಎರಡು ಗ್ರಾಮಗಳು ಎಣ್ಮೂರು ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟಿತ್ತು. ಇತ್ತೀಚೆಗೆ ನೂತನವಾಗಿ ರಚನೆಯಾದ ಕಡಬ ತಾಲೂಕಿಗೆ ಎಣ್ಮೂರು ಸೇರ್ಪಡೆಯಾಗಿದೆ. ಮುರುಳ್ಯ ಗ್ರಾಮವು ಸುಳ್ಯ ತಾಲೂಕಿನಲ್ಲಿಯೇ ಉಳಿದುಕೊಂಡಿದ್ದು, ಇವುಗಳೆರಡಕ್ಕೂ ಐತಿಹಾಸಿಕ ಹಿನ್ನೆಲೆಯಿದೆ. ಈಗಾಗಲೇ ಎಲ್ಲಾ ಬಗೆಯ ಮೂಲ ಸೌಕರ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಣ್ಮೂರು ಗ್ರಾಮ ಪಂಚಾಯತ್ ಎಣ್ಮೂರಿನಲ್ಲಿಯೇ ಕಾರ್ಯಾಚರಿಸುತ್ತಿದ್ದು ಎಲ್ಲಾ ವ್ಯವಸ್ಥೆ ಹೊಂದಿದೆ. ಹೀಗಾಗಿ ಎಣ್ಮೂರು ಗ್ರಾಮ ಪಂಚಾಯತ್ ಆಗಿಯೇ ಕಡಬ ತಾಲೂಕಿನಲ್ಲಿ ಉಳಿಸಬೇಕೆಂದು ರಮೇಶ್ ಕೋಟೆಯವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಎನ್.ಜಿ ಪ್ರಭಾಕರ ರೈ, ಎನ್.ಜಿ ಲೋಕನಾಥ ರೈ, ಎಣ್ಮೂರು ಗ್ರಾಮ ಪಂಚಾಯತ್ ಸದಸ್ಯ ರಘುಪ್ರಸಾದ್ ರೈ, ಸಾದಿಕ್ ನರ್ಲಡ್ಕ, ಜನಾರ್ಧನ ,ಮಾಯಿಲಪ್ಪ ಗೌಡ, ಮಹಮ್ಮದ್ ಎಣ್ಮೂರು ಉಪಸ್ಥಿತರಿದ್ದರು.
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…