ನಿಂತಿಕಲ್ಲು: ಸುಳ್ಯ ತಾಲೂಕಿನಿಂದ ಬೇರ್ಪಟ್ಟು ನೂತನ ಕಡಬ ತಾಲೂಕಿಗೆ ಸೇರ್ಪಡೆಗೊಂಡ ಎಣ್ಮೂರು ಗ್ರಾಮವನ್ನು ಗ್ರಾಮ ಪಂಚಾಯತ್ ಆಗಿ ಕಡಬ ತಾಲೂಕಿನೊಳಗೆ ಉಳಿಸಬೇಕೆಂದು ಎಣ್ಮೂರು ನಾಗರೀಕರು ಕಡಬ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸುಳ್ಯ ತಾಲೂಕಿನ ಮುರುಳ್ಯ ಹಾಗು ಎಣ್ಮೂರು ಈ ಎರಡು ಗ್ರಾಮಗಳು ಎಣ್ಮೂರು ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟಿತ್ತು. ಇತ್ತೀಚೆಗೆ ನೂತನವಾಗಿ ರಚನೆಯಾದ ಕಡಬ ತಾಲೂಕಿಗೆ ಎಣ್ಮೂರು ಸೇರ್ಪಡೆಯಾಗಿದೆ. ಮುರುಳ್ಯ ಗ್ರಾಮವು ಸುಳ್ಯ ತಾಲೂಕಿನಲ್ಲಿಯೇ ಉಳಿದುಕೊಂಡಿದ್ದು, ಇವುಗಳೆರಡಕ್ಕೂ ಐತಿಹಾಸಿಕ ಹಿನ್ನೆಲೆಯಿದೆ. ಈಗಾಗಲೇ ಎಲ್ಲಾ ಬಗೆಯ ಮೂಲ ಸೌಕರ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಣ್ಮೂರು ಗ್ರಾಮ ಪಂಚಾಯತ್ ಎಣ್ಮೂರಿನಲ್ಲಿಯೇ ಕಾರ್ಯಾಚರಿಸುತ್ತಿದ್ದು ಎಲ್ಲಾ ವ್ಯವಸ್ಥೆ ಹೊಂದಿದೆ. ಹೀಗಾಗಿ ಎಣ್ಮೂರು ಗ್ರಾಮ ಪಂಚಾಯತ್ ಆಗಿಯೇ ಕಡಬ ತಾಲೂಕಿನಲ್ಲಿ ಉಳಿಸಬೇಕೆಂದು ರಮೇಶ್ ಕೋಟೆಯವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಎನ್.ಜಿ ಪ್ರಭಾಕರ ರೈ, ಎನ್.ಜಿ ಲೋಕನಾಥ ರೈ, ಎಣ್ಮೂರು ಗ್ರಾಮ ಪಂಚಾಯತ್ ಸದಸ್ಯ ರಘುಪ್ರಸಾದ್ ರೈ, ಸಾದಿಕ್ ನರ್ಲಡ್ಕ, ಜನಾರ್ಧನ ,ಮಾಯಿಲಪ್ಪ ಗೌಡ, ಮಹಮ್ಮದ್ ಎಣ್ಮೂರು ಉಪಸ್ಥಿತರಿದ್ದರು.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…