ನಿಂತಿಕಲ್ಲು: ಸುಳ್ಯ ತಾಲೂಕಿನಿಂದ ಬೇರ್ಪಟ್ಟು ನೂತನ ಕಡಬ ತಾಲೂಕಿಗೆ ಸೇರ್ಪಡೆಗೊಂಡ ಎಣ್ಮೂರು ಗ್ರಾಮವನ್ನು ಗ್ರಾಮ ಪಂಚಾಯತ್ ಆಗಿ ಕಡಬ ತಾಲೂಕಿನೊಳಗೆ ಉಳಿಸಬೇಕೆಂದು ಎಣ್ಮೂರು ನಾಗರೀಕರು ಕಡಬ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸುಳ್ಯ ತಾಲೂಕಿನ ಮುರುಳ್ಯ ಹಾಗು ಎಣ್ಮೂರು ಈ ಎರಡು ಗ್ರಾಮಗಳು ಎಣ್ಮೂರು ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟಿತ್ತು. ಇತ್ತೀಚೆಗೆ ನೂತನವಾಗಿ ರಚನೆಯಾದ ಕಡಬ ತಾಲೂಕಿಗೆ ಎಣ್ಮೂರು ಸೇರ್ಪಡೆಯಾಗಿದೆ. ಮುರುಳ್ಯ ಗ್ರಾಮವು ಸುಳ್ಯ ತಾಲೂಕಿನಲ್ಲಿಯೇ ಉಳಿದುಕೊಂಡಿದ್ದು, ಇವುಗಳೆರಡಕ್ಕೂ ಐತಿಹಾಸಿಕ ಹಿನ್ನೆಲೆಯಿದೆ. ಈಗಾಗಲೇ ಎಲ್ಲಾ ಬಗೆಯ ಮೂಲ ಸೌಕರ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಣ್ಮೂರು ಗ್ರಾಮ ಪಂಚಾಯತ್ ಎಣ್ಮೂರಿನಲ್ಲಿಯೇ ಕಾರ್ಯಾಚರಿಸುತ್ತಿದ್ದು ಎಲ್ಲಾ ವ್ಯವಸ್ಥೆ ಹೊಂದಿದೆ. ಹೀಗಾಗಿ ಎಣ್ಮೂರು ಗ್ರಾಮ ಪಂಚಾಯತ್ ಆಗಿಯೇ ಕಡಬ ತಾಲೂಕಿನಲ್ಲಿ ಉಳಿಸಬೇಕೆಂದು ರಮೇಶ್ ಕೋಟೆಯವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಎನ್.ಜಿ ಪ್ರಭಾಕರ ರೈ, ಎನ್.ಜಿ ಲೋಕನಾಥ ರೈ, ಎಣ್ಮೂರು ಗ್ರಾಮ ಪಂಚಾಯತ್ ಸದಸ್ಯ ರಘುಪ್ರಸಾದ್ ರೈ, ಸಾದಿಕ್ ನರ್ಲಡ್ಕ, ಜನಾರ್ಧನ ,ಮಾಯಿಲಪ್ಪ ಗೌಡ, ಮಹಮ್ಮದ್ ಎಣ್ಮೂರು ಉಪಸ್ಥಿತರಿದ್ದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…