ಅಪರಾಧ

ಎಣ್ಮೂರು ಗ್ರಾಮ ಪಂಚಾಯತ್ ನೌಕರ ಆತ್ಮಹತ್ಯೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಿಂತಿಕಲ್ಲು: ಎಣ್ಮೂರು ಗ್ರಾಮ ಪಂಚಾಯತ್ ನೌಕರ ಮೋಹನ (35) ಎಂಬವರು ಮಂಗಳವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿಕೊಂಡ ಘಟನೆ ನಡೆದಿದೆ.

Advertisement

ಎಣ್ಮೂರು ಗ್ರಾಮ ಪಂಚಾಯತ್ ಲ್ಲಿ ನಡೆದಿದೆ ಎನ್ನಲಾದ  ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿ ಪಂಚಾಯತ್ ಆಡಳಿತ ಮಂಡಳಿ ಇಬ್ಬರು ನೌಕರರನ್ನು ಅಮಾನತುಗೊಳಿಸಿತ್ತು. ಅವರಲ್ಲಿ ಮೋಹನ್ ಕೂಡಾ  ಒಬ್ಬರಾಗಿದ್ದರು. ಕೆಲಸದಿಂದ ಅಮಾನತುಗೊಂಡಿದ್ದರಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದ ಹಿನ್ನಲೆಯಲ್ಲಿ ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ವಿಷ ಸೇವಿಸಿದ  ವಿಚಾರ ತಿಳಿದ ಮನೆಯವರು ಮತ್ತು ಸ್ಥಳೀಯರು ಅವರನ್ನು ಕೂಡಲೇ ಪುತ್ತೂರು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಇಂದು ಬೆಳಗ್ಗೆ ಮೃತದೇಹವನ್ನು ಅವರ ಮನೆಗೆ ತರಲಾಗಿದೆ.

ಈ ಪ್ರಕರಣದ ಕುರಿತು ಸೂಕ್ತವಾಗಿ ಹಾಗೂ ಪಾರದರ್ಶಕವಾಗಿ ತನಿಖೆ ನಡೆಸಬೇಕೆಂದು ತನಿಖೆಗೆ ದಲಿತ ಸಂಘಟನೆಗಳು  ಆಗ್ರಹಿಸಿದ್ದು, ತಪ್ಪಿದಲ್ಲಿ ಮೃತದೇಹವನ್ನು ಪಂಚಾಯತ್ ಮುಂಭಾಗದಲ್ಲಿ ಇಟ್ಟು ಉಗ್ರ ಹೋರಾಟ ನಡೆಸುವುದಾಗಿ ದಲಿತ ಸಂಘಟನೆ ಹೇಳಿದೆ. ಸ್ಥಳಕ್ಕಾಗಮಿಸಿದ ಬೆಳ್ಳಾರೆ ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ಈರಯ್ಯ ಡಿ.ಎನ್ ಮಾಹಿತಿ ಪಡೆದುಕೊಂಡಿದ್ದು, ಮೃತ ಮೋಹನರ ಪತ್ನಿಗೆ ಉದ್ಯೋಗ ದೊರಕಿಸಿ ಕೊಡಲು ಸಂಬಂಧಿಸಿದವರಲ್ಲಿ ಮಾತನಾಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಿಚಾರ ಹಿಂದೆ ತೆಗೆದುಕೊಳ್ಳಲಾಯಿತು.

 

Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

32 minutes ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

2 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

1 day ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago

ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |

ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…

2 days ago

ಹೊಸರುಚಿ | ಹಲಸಿನ ಹಣ್ಣಿನ ಹಲ್ವ

ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 1 ಕಪ್. ಜಾರ್…

2 days ago