Advertisement
ಅಪರಾಧ

ಎಣ್ಮೂರು ಗ್ರಾಮ ಪಂಚಾಯತ್ ನೌಕರ ಆತ್ಮಹತ್ಯೆ

Share

ನಿಂತಿಕಲ್ಲು: ಎಣ್ಮೂರು ಗ್ರಾಮ ಪಂಚಾಯತ್ ನೌಕರ ಮೋಹನ (35) ಎಂಬವರು ಮಂಗಳವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿಕೊಂಡ ಘಟನೆ ನಡೆದಿದೆ.

ಎಣ್ಮೂರು ಗ್ರಾಮ ಪಂಚಾಯತ್ ಲ್ಲಿ ನಡೆದಿದೆ ಎನ್ನಲಾದ  ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿ ಪಂಚಾಯತ್ ಆಡಳಿತ ಮಂಡಳಿ ಇಬ್ಬರು ನೌಕರರನ್ನು ಅಮಾನತುಗೊಳಿಸಿತ್ತು. ಅವರಲ್ಲಿ ಮೋಹನ್ ಕೂಡಾ  ಒಬ್ಬರಾಗಿದ್ದರು. ಕೆಲಸದಿಂದ ಅಮಾನತುಗೊಂಡಿದ್ದರಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದ ಹಿನ್ನಲೆಯಲ್ಲಿ ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ವಿಷ ಸೇವಿಸಿದ  ವಿಚಾರ ತಿಳಿದ ಮನೆಯವರು ಮತ್ತು ಸ್ಥಳೀಯರು ಅವರನ್ನು ಕೂಡಲೇ ಪುತ್ತೂರು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಇಂದು ಬೆಳಗ್ಗೆ ಮೃತದೇಹವನ್ನು ಅವರ ಮನೆಗೆ ತರಲಾಗಿದೆ.

ಈ ಪ್ರಕರಣದ ಕುರಿತು ಸೂಕ್ತವಾಗಿ ಹಾಗೂ ಪಾರದರ್ಶಕವಾಗಿ ತನಿಖೆ ನಡೆಸಬೇಕೆಂದು ತನಿಖೆಗೆ ದಲಿತ ಸಂಘಟನೆಗಳು  ಆಗ್ರಹಿಸಿದ್ದು, ತಪ್ಪಿದಲ್ಲಿ ಮೃತದೇಹವನ್ನು ಪಂಚಾಯತ್ ಮುಂಭಾಗದಲ್ಲಿ ಇಟ್ಟು ಉಗ್ರ ಹೋರಾಟ ನಡೆಸುವುದಾಗಿ ದಲಿತ ಸಂಘಟನೆ ಹೇಳಿದೆ. ಸ್ಥಳಕ್ಕಾಗಮಿಸಿದ ಬೆಳ್ಳಾರೆ ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ಈರಯ್ಯ ಡಿ.ಎನ್ ಮಾಹಿತಿ ಪಡೆದುಕೊಂಡಿದ್ದು, ಮೃತ ಮೋಹನರ ಪತ್ನಿಗೆ ಉದ್ಯೋಗ ದೊರಕಿಸಿ ಕೊಡಲು ಸಂಬಂಧಿಸಿದವರಲ್ಲಿ ಮಾತನಾಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಿಚಾರ ಹಿಂದೆ ತೆಗೆದುಕೊಳ್ಳಲಾಯಿತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

2 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

5 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

5 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

9 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

9 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

12 hours ago