(ಸಾಂದರ್ಭಿಕ ಚಿತ್ರ)
ನಿಂತಿಕಲ್ಲು: ಎಣ್ಮೂರು ಗ್ರಾಮ ಪಂಚಾಯತ್ ನೌಕರ ಮೋಹನ (35) ಎಂಬವರು ಮಂಗಳವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿಕೊಂಡ ಘಟನೆ ನಡೆದಿದೆ.
ಎಣ್ಮೂರು ಗ್ರಾಮ ಪಂಚಾಯತ್ ಲ್ಲಿ ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿ ಪಂಚಾಯತ್ ಆಡಳಿತ ಮಂಡಳಿ ಇಬ್ಬರು ನೌಕರರನ್ನು ಅಮಾನತುಗೊಳಿಸಿತ್ತು. ಅವರಲ್ಲಿ ಮೋಹನ್ ಕೂಡಾ ಒಬ್ಬರಾಗಿದ್ದರು. ಕೆಲಸದಿಂದ ಅಮಾನತುಗೊಂಡಿದ್ದರಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದ ಹಿನ್ನಲೆಯಲ್ಲಿ ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ವಿಷ ಸೇವಿಸಿದ ವಿಚಾರ ತಿಳಿದ ಮನೆಯವರು ಮತ್ತು ಸ್ಥಳೀಯರು ಅವರನ್ನು ಕೂಡಲೇ ಪುತ್ತೂರು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಇಂದು ಬೆಳಗ್ಗೆ ಮೃತದೇಹವನ್ನು ಅವರ ಮನೆಗೆ ತರಲಾಗಿದೆ.
ಈ ಪ್ರಕರಣದ ಕುರಿತು ಸೂಕ್ತವಾಗಿ ಹಾಗೂ ಪಾರದರ್ಶಕವಾಗಿ ತನಿಖೆ ನಡೆಸಬೇಕೆಂದು ತನಿಖೆಗೆ ದಲಿತ ಸಂಘಟನೆಗಳು ಆಗ್ರಹಿಸಿದ್ದು, ತಪ್ಪಿದಲ್ಲಿ ಮೃತದೇಹವನ್ನು ಪಂಚಾಯತ್ ಮುಂಭಾಗದಲ್ಲಿ ಇಟ್ಟು ಉಗ್ರ ಹೋರಾಟ ನಡೆಸುವುದಾಗಿ ದಲಿತ ಸಂಘಟನೆ ಹೇಳಿದೆ. ಸ್ಥಳಕ್ಕಾಗಮಿಸಿದ ಬೆಳ್ಳಾರೆ ಪೊಲೀಸ್ ಸಬ್ಇನ್ಸ್ಪೆಕ್ಟರ್ ಈರಯ್ಯ ಡಿ.ಎನ್ ಮಾಹಿತಿ ಪಡೆದುಕೊಂಡಿದ್ದು, ಮೃತ ಮೋಹನರ ಪತ್ನಿಗೆ ಉದ್ಯೋಗ ದೊರಕಿಸಿ ಕೊಡಲು ಸಂಬಂಧಿಸಿದವರಲ್ಲಿ ಮಾತನಾಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಿಚಾರ ಹಿಂದೆ ತೆಗೆದುಕೊಳ್ಳಲಾಯಿತು.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…