(ಸಾಂದರ್ಭಿಕ ಚಿತ್ರ)
ನಿಂತಿಕಲ್ಲು: ಎಣ್ಮೂರು ಗ್ರಾಮ ಪಂಚಾಯತ್ ನೌಕರ ಮೋಹನ (35) ಎಂಬವರು ಮಂಗಳವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿಕೊಂಡ ಘಟನೆ ನಡೆದಿದೆ.
ಎಣ್ಮೂರು ಗ್ರಾಮ ಪಂಚಾಯತ್ ಲ್ಲಿ ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿ ಪಂಚಾಯತ್ ಆಡಳಿತ ಮಂಡಳಿ ಇಬ್ಬರು ನೌಕರರನ್ನು ಅಮಾನತುಗೊಳಿಸಿತ್ತು. ಅವರಲ್ಲಿ ಮೋಹನ್ ಕೂಡಾ ಒಬ್ಬರಾಗಿದ್ದರು. ಕೆಲಸದಿಂದ ಅಮಾನತುಗೊಂಡಿದ್ದರಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದ ಹಿನ್ನಲೆಯಲ್ಲಿ ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ವಿಷ ಸೇವಿಸಿದ ವಿಚಾರ ತಿಳಿದ ಮನೆಯವರು ಮತ್ತು ಸ್ಥಳೀಯರು ಅವರನ್ನು ಕೂಡಲೇ ಪುತ್ತೂರು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಇಂದು ಬೆಳಗ್ಗೆ ಮೃತದೇಹವನ್ನು ಅವರ ಮನೆಗೆ ತರಲಾಗಿದೆ.
ಈ ಪ್ರಕರಣದ ಕುರಿತು ಸೂಕ್ತವಾಗಿ ಹಾಗೂ ಪಾರದರ್ಶಕವಾಗಿ ತನಿಖೆ ನಡೆಸಬೇಕೆಂದು ತನಿಖೆಗೆ ದಲಿತ ಸಂಘಟನೆಗಳು ಆಗ್ರಹಿಸಿದ್ದು, ತಪ್ಪಿದಲ್ಲಿ ಮೃತದೇಹವನ್ನು ಪಂಚಾಯತ್ ಮುಂಭಾಗದಲ್ಲಿ ಇಟ್ಟು ಉಗ್ರ ಹೋರಾಟ ನಡೆಸುವುದಾಗಿ ದಲಿತ ಸಂಘಟನೆ ಹೇಳಿದೆ. ಸ್ಥಳಕ್ಕಾಗಮಿಸಿದ ಬೆಳ್ಳಾರೆ ಪೊಲೀಸ್ ಸಬ್ಇನ್ಸ್ಪೆಕ್ಟರ್ ಈರಯ್ಯ ಡಿ.ಎನ್ ಮಾಹಿತಿ ಪಡೆದುಕೊಂಡಿದ್ದು, ಮೃತ ಮೋಹನರ ಪತ್ನಿಗೆ ಉದ್ಯೋಗ ದೊರಕಿಸಿ ಕೊಡಲು ಸಂಬಂಧಿಸಿದವರಲ್ಲಿ ಮಾತನಾಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಿಚಾರ ಹಿಂದೆ ತೆಗೆದುಕೊಳ್ಳಲಾಯಿತು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…