ನಿಂತಿಕಲ್ಲು: ಎಣ್ಮೂರು ಗ್ರಾಮ ಪಂಚಾಯತ್ ನೌಕರ ಮೋಹನ (35) ಎಂಬವರು ಮಂಗಳವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿಕೊಂಡ ಘಟನೆ ನಡೆದಿದೆ.
ಎಣ್ಮೂರು ಗ್ರಾಮ ಪಂಚಾಯತ್ ಲ್ಲಿ ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿ ಪಂಚಾಯತ್ ಆಡಳಿತ ಮಂಡಳಿ ಇಬ್ಬರು ನೌಕರರನ್ನು ಅಮಾನತುಗೊಳಿಸಿತ್ತು. ಅವರಲ್ಲಿ ಮೋಹನ್ ಕೂಡಾ ಒಬ್ಬರಾಗಿದ್ದರು. ಕೆಲಸದಿಂದ ಅಮಾನತುಗೊಂಡಿದ್ದರಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದ ಹಿನ್ನಲೆಯಲ್ಲಿ ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ವಿಷ ಸೇವಿಸಿದ ವಿಚಾರ ತಿಳಿದ ಮನೆಯವರು ಮತ್ತು ಸ್ಥಳೀಯರು ಅವರನ್ನು ಕೂಡಲೇ ಪುತ್ತೂರು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಇಂದು ಬೆಳಗ್ಗೆ ಮೃತದೇಹವನ್ನು ಅವರ ಮನೆಗೆ ತರಲಾಗಿದೆ.
ಈ ಪ್ರಕರಣದ ಕುರಿತು ಸೂಕ್ತವಾಗಿ ಹಾಗೂ ಪಾರದರ್ಶಕವಾಗಿ ತನಿಖೆ ನಡೆಸಬೇಕೆಂದು ತನಿಖೆಗೆ ದಲಿತ ಸಂಘಟನೆಗಳು ಆಗ್ರಹಿಸಿದ್ದು, ತಪ್ಪಿದಲ್ಲಿ ಮೃತದೇಹವನ್ನು ಪಂಚಾಯತ್ ಮುಂಭಾಗದಲ್ಲಿ ಇಟ್ಟು ಉಗ್ರ ಹೋರಾಟ ನಡೆಸುವುದಾಗಿ ದಲಿತ ಸಂಘಟನೆ ಹೇಳಿದೆ. ಸ್ಥಳಕ್ಕಾಗಮಿಸಿದ ಬೆಳ್ಳಾರೆ ಪೊಲೀಸ್ ಸಬ್ಇನ್ಸ್ಪೆಕ್ಟರ್ ಈರಯ್ಯ ಡಿ.ಎನ್ ಮಾಹಿತಿ ಪಡೆದುಕೊಂಡಿದ್ದು, ಮೃತ ಮೋಹನರ ಪತ್ನಿಗೆ ಉದ್ಯೋಗ ದೊರಕಿಸಿ ಕೊಡಲು ಸಂಬಂಧಿಸಿದವರಲ್ಲಿ ಮಾತನಾಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಿಚಾರ ಹಿಂದೆ ತೆಗೆದುಕೊಳ್ಳಲಾಯಿತು.
ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…
ಕೊರೋನಾ(Corona) ಬಂದು ಈಗಾಗಲೇ 4 ವರ್ಷ ಕಳೆಯಿತು. ಅದಕ್ಕೆ ಬೇಕಾದ ಲಸಿಕೆಯನ್ನು(Vaccination) ಸರ್ಕಾರವೇ(Govt)…
ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್ ಮಾಡುತ್ತಲೇ ಇರುತ್ತದೆ.…
ಈ ಬಾರಿಯ ಹವಾಮಾನ ವೈಪರೀತ್ಯ (Climate change) ಹಾಗೂ ಬರಗಾಲ(Drought) ಕೇವಲ ಮನುಷ್ಯರಿಗೆ…
ದೇಶದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ವೈಪರೀತ್ಯ(Climate change) ಕಂಡು ಬರುತ್ತಿದ್ದು, ದೇಶದ ಪೂರ್ವದಿಂದ…
ಮಕ್ಕಳಲ್ಲಿ ಸಾಧನೆಯ ಸಾಧ್ಯತೆಗಳತ್ತ ಬೊಟ್ಟು ಮಾಡಿ ಎತ್ತರದ ಮಾದರಿಗಳನ್ನು ತೋರಿಸುವ ಕೆಲಸವು ಶಿಕ್ಷಕರಿಂದ…