(ಸಾಂದರ್ಭಿಕ ಚಿತ್ರ)
ನಿಂತಿಕಲ್ಲು: ಎಣ್ಮೂರು ಗ್ರಾಮ ಪಂಚಾಯತ್ ನೌಕರ ಮೋಹನ (35) ಎಂಬವರು ಮಂಗಳವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿಕೊಂಡ ಘಟನೆ ನಡೆದಿದೆ.
ಎಣ್ಮೂರು ಗ್ರಾಮ ಪಂಚಾಯತ್ ಲ್ಲಿ ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿ ಪಂಚಾಯತ್ ಆಡಳಿತ ಮಂಡಳಿ ಇಬ್ಬರು ನೌಕರರನ್ನು ಅಮಾನತುಗೊಳಿಸಿತ್ತು. ಅವರಲ್ಲಿ ಮೋಹನ್ ಕೂಡಾ ಒಬ್ಬರಾಗಿದ್ದರು. ಕೆಲಸದಿಂದ ಅಮಾನತುಗೊಂಡಿದ್ದರಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದ ಹಿನ್ನಲೆಯಲ್ಲಿ ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ವಿಷ ಸೇವಿಸಿದ ವಿಚಾರ ತಿಳಿದ ಮನೆಯವರು ಮತ್ತು ಸ್ಥಳೀಯರು ಅವರನ್ನು ಕೂಡಲೇ ಪುತ್ತೂರು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಇಂದು ಬೆಳಗ್ಗೆ ಮೃತದೇಹವನ್ನು ಅವರ ಮನೆಗೆ ತರಲಾಗಿದೆ.
ಈ ಪ್ರಕರಣದ ಕುರಿತು ಸೂಕ್ತವಾಗಿ ಹಾಗೂ ಪಾರದರ್ಶಕವಾಗಿ ತನಿಖೆ ನಡೆಸಬೇಕೆಂದು ತನಿಖೆಗೆ ದಲಿತ ಸಂಘಟನೆಗಳು ಆಗ್ರಹಿಸಿದ್ದು, ತಪ್ಪಿದಲ್ಲಿ ಮೃತದೇಹವನ್ನು ಪಂಚಾಯತ್ ಮುಂಭಾಗದಲ್ಲಿ ಇಟ್ಟು ಉಗ್ರ ಹೋರಾಟ ನಡೆಸುವುದಾಗಿ ದಲಿತ ಸಂಘಟನೆ ಹೇಳಿದೆ. ಸ್ಥಳಕ್ಕಾಗಮಿಸಿದ ಬೆಳ್ಳಾರೆ ಪೊಲೀಸ್ ಸಬ್ಇನ್ಸ್ಪೆಕ್ಟರ್ ಈರಯ್ಯ ಡಿ.ಎನ್ ಮಾಹಿತಿ ಪಡೆದುಕೊಂಡಿದ್ದು, ಮೃತ ಮೋಹನರ ಪತ್ನಿಗೆ ಉದ್ಯೋಗ ದೊರಕಿಸಿ ಕೊಡಲು ಸಂಬಂಧಿಸಿದವರಲ್ಲಿ ಮಾತನಾಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಿಚಾರ ಹಿಂದೆ ತೆಗೆದುಕೊಳ್ಳಲಾಯಿತು.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…