Advertisement
ಕಾರ್ಯಕ್ರಮಗಳು

ಎಣ್ಮೂರು: ಚಿತ್ರಕಲಾ ಸಂಭ್ರಮ

Share

ಎಣ್ಮೂರು: ಹುಟ್ಟಿದ ಪ್ರತಿಯೊಬ್ಬನಲ್ಲೂ ಪ್ರತಿಭೆ ಇದೆ. ಅದನ್ನು ಪ್ರೇರೇಪಿಸುವ ಅಗತ್ಯವಿದೆ ಹಾಗೂ ಚಿತ್ರಕಲೆಯು ವಿಧ್ಯಾರ್ಥಿಗಳ ಸೃಜನ ಶೀಲತೆ ಬೆಳೆಸಲು ಕಾರಣವಾಗುತ್ತದೆ ಎಂದು ಶ್ರೀ ವಾಸುದೇವ ನಡ್ಕ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಗುರು ಇವರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುವಿಚಾರ ಸಾಹಿತ್ಯ ವೇದಿಕೆ ಹಾಗೂ ತಾಲೂಕು ಚಿತ್ರಕಲಾ ಶಿಕ್ಷಕರ ಸಂಘ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ ನಡೆದ ಚಿತ್ರಕಲಾ ಸಂಭ್ರಮ ಹಾಗೂ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅಥಿತಿಗಳಾಗಿ ಕೇರ್ಪಡ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಅಕ್ಷಯ್ ಆಳ್ವಾ ಇವರು ಭಾಗವಹಿಸಿದ್ದರು. ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಮಹಾಬಲ ಕುಳ ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಮುತ್ತಪ್ಪ ಗೌಡ ಅಧ್ಯಕ್ಷತೆ ವಹಿಸಿದರು. ಸರ್ಕಾರಿ ಪ್ರೌಢಶಾಲೆ ಎಣ್ಮೂರು ಇದರ ಮುಖ್ಯ ಶಿಕ್ಷಕಿ ಶೀತಲ್ ಯು.ಕೆ ಎಲ್ಲರನ್ನು ಸ್ವಾಗತಿಸಿದರು. ಸುವಿಚಾರ ಸಾಹಿತ್ಯ ವೇದಿಕೆ ಅಧ್ಯಕ್ಷರಾದ ಚಂದ್ರಶೇಖರ್ ಪೆರಾಲ್ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಮೋಹನ್ ಎಣ್ಮೂರು ಹಾಗೂ ಉಷಾ ಕೆ. ಎಸ್ ಇವರು ಕಾರ್ಯಕ್ರಮ ಸಂಯೋಜಿಸಿದರು. ಶಿಕ್ಷಕರಾದ ಸಂತೋಷ್ ಇವರು ಎಲ್ಲರಿಗೂ ವಂದಿಸಿದರು.

ಸ್ಪರ್ಧಾ ಪಲಿತಾಂಶ: ಪ್ರಾಥಮಿಕ ವಿಭಾಗದಲ್ಲಿ ಪ್ರಥಮ: ಪ್ರಥ್ವಿನ್ ಸಹಿಪ್ರಾ ಶಾಲೆ ಪೆರುವಾಜೆ, ದ್ವಿತೀಯ: ನೇಹಾ ಕೆ ಯಸ್ ಜಿ ನಿಂತಿಕಲ್, ತೃತೀಯ: ಮನಸ್ವಿ ರೋಟರಿ ಶಾಲೆ ಸುಳ್ಯ
ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ: ಕನ್ನಿಕಾ ಅಂಬೇಕಾಲ್ ರೋಟರಿ ಶಾಲೆ, ದ್ವಿತೀಯ: ಸಂಜನಾ ಕೆಕೆ ರೋಟರಿ ಶಾಲೆ, ತೃತೀಯ:ದುಷ್ಯಂತ ಸಿ ಸ ಪ್ರೌ ಶಾಲೆ ಪಂಜ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

10 hours ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

10 hours ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

11 hours ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

19 hours ago

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ

ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…

24 hours ago

ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?

ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…

24 hours ago