ಎಣ್ಮೂರು : ಎಣ್ಮೂರು ಸರಕಾರಿ ಪ್ರೌಡಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಅನ್ನ ನೀಡುವ ಭತ್ತದ ಬೇಸಾಯದ ನೇಜಿ ನಾಟಿ ಕುರಿತು ತಿಳುವಳಿಕೆ ನೀಡುವ ಶಿಕ್ಷಣದೊಂದಿಗೆ ನೇಜಿ ಕೃಷಿ ಪಾಠ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಶಾಲಾ ಎಸ್ಡಿಎಂಸಿ ಮಾಜಿ ಅದ್ಯಕ್ಷ ಸೋಮಪ್ಪ ಗೌಡ ಕುಳ್ತಿಗೆ ನೇಜಿ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಅವರು ಭತ್ತದಿಂದ ಅಕ್ಕಿ ತಯಾರಿಸುವ ವಿಧಾನ ಮತ್ತು ಸಾವಯುವ ಜೀನನಾಂಶಕ ಅಕ್ಕಿಯ ಮಹತ್ವದ ಕುರಿತು ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಶೀತಲ್ ಭತ್ತ ಬೇಸಾಯದಲ್ಲಿ ಗದ್ದೆ ಹದಗೊಳಿಸುವ ನಾಟಿ ನೆಡುವ ವಿಧಾನಗಳ ಕುರಿತು ಮಾಹಿತಿ ಒದಗಿಸಿದರು. ಅಕ್ಷರಾ ದಾಸೋಹ ಸಿಬಂದಿಗಳಾದ ಪ್ರೇಮ ಪರ್ಲಡ್ಕ, ಪ್ರಮೀಳಾ ರೈ ಕಸ್ತೂರಿ ಪಾಡ್ದನ ಹಾಡಿ ಬಾಲ ರೈತ ಮಕ್ಕಳ ಗಮನ ಸೆಳೆದರು.
ಶಿಕ್ಷಕರಾದ ದಿವ್ಯಾ ಎಂ.ಕೆ,ಉಷಾ ಕೆ.ಎಸ್ ಸಂತೋಷ್ ಮಕ್ಕಳ ಜತೆ ನಾಟಿ ಕಾರ್ಯದಲ್ಲಿ ಸಹಕರಿಸಿದರು. ಶಿಕ್ಷಕ ಮೋಹನ ಗೌಡ ಎ ಸ್ವಾಗತಿಸಿ ಜೆಸಿಂತಾ ಮೊಂತೇರೋ ವಂದಿಸಿದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…