ಎಣ್ಮೂರು : ಎಣ್ಮೂರು ಸರಕಾರಿ ಪ್ರೌಡಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಅನ್ನ ನೀಡುವ ಭತ್ತದ ಬೇಸಾಯದ ನೇಜಿ ನಾಟಿ ಕುರಿತು ತಿಳುವಳಿಕೆ ನೀಡುವ ಶಿಕ್ಷಣದೊಂದಿಗೆ ನೇಜಿ ಕೃಷಿ ಪಾಠ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಶಾಲಾ ಎಸ್ಡಿಎಂಸಿ ಮಾಜಿ ಅದ್ಯಕ್ಷ ಸೋಮಪ್ಪ ಗೌಡ ಕುಳ್ತಿಗೆ ನೇಜಿ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಅವರು ಭತ್ತದಿಂದ ಅಕ್ಕಿ ತಯಾರಿಸುವ ವಿಧಾನ ಮತ್ತು ಸಾವಯುವ ಜೀನನಾಂಶಕ ಅಕ್ಕಿಯ ಮಹತ್ವದ ಕುರಿತು ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಶೀತಲ್ ಭತ್ತ ಬೇಸಾಯದಲ್ಲಿ ಗದ್ದೆ ಹದಗೊಳಿಸುವ ನಾಟಿ ನೆಡುವ ವಿಧಾನಗಳ ಕುರಿತು ಮಾಹಿತಿ ಒದಗಿಸಿದರು. ಅಕ್ಷರಾ ದಾಸೋಹ ಸಿಬಂದಿಗಳಾದ ಪ್ರೇಮ ಪರ್ಲಡ್ಕ, ಪ್ರಮೀಳಾ ರೈ ಕಸ್ತೂರಿ ಪಾಡ್ದನ ಹಾಡಿ ಬಾಲ ರೈತ ಮಕ್ಕಳ ಗಮನ ಸೆಳೆದರು.
ಶಿಕ್ಷಕರಾದ ದಿವ್ಯಾ ಎಂ.ಕೆ,ಉಷಾ ಕೆ.ಎಸ್ ಸಂತೋಷ್ ಮಕ್ಕಳ ಜತೆ ನಾಟಿ ಕಾರ್ಯದಲ್ಲಿ ಸಹಕರಿಸಿದರು. ಶಿಕ್ಷಕ ಮೋಹನ ಗೌಡ ಎ ಸ್ವಾಗತಿಸಿ ಜೆಸಿಂತಾ ಮೊಂತೇರೋ ವಂದಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…