ಎಣ್ಮೂರು : ಎಣ್ಮೂರು ಸರಕಾರಿ ಪ್ರೌಡಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಅನ್ನ ನೀಡುವ ಭತ್ತದ ಬೇಸಾಯದ ನೇಜಿ ನಾಟಿ ಕುರಿತು ತಿಳುವಳಿಕೆ ನೀಡುವ ಶಿಕ್ಷಣದೊಂದಿಗೆ ನೇಜಿ ಕೃಷಿ ಪಾಠ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಶಾಲಾ ಎಸ್ಡಿಎಂಸಿ ಮಾಜಿ ಅದ್ಯಕ್ಷ ಸೋಮಪ್ಪ ಗೌಡ ಕುಳ್ತಿಗೆ ನೇಜಿ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಅವರು ಭತ್ತದಿಂದ ಅಕ್ಕಿ ತಯಾರಿಸುವ ವಿಧಾನ ಮತ್ತು ಸಾವಯುವ ಜೀನನಾಂಶಕ ಅಕ್ಕಿಯ ಮಹತ್ವದ ಕುರಿತು ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಶೀತಲ್ ಭತ್ತ ಬೇಸಾಯದಲ್ಲಿ ಗದ್ದೆ ಹದಗೊಳಿಸುವ ನಾಟಿ ನೆಡುವ ವಿಧಾನಗಳ ಕುರಿತು ಮಾಹಿತಿ ಒದಗಿಸಿದರು. ಅಕ್ಷರಾ ದಾಸೋಹ ಸಿಬಂದಿಗಳಾದ ಪ್ರೇಮ ಪರ್ಲಡ್ಕ, ಪ್ರಮೀಳಾ ರೈ ಕಸ್ತೂರಿ ಪಾಡ್ದನ ಹಾಡಿ ಬಾಲ ರೈತ ಮಕ್ಕಳ ಗಮನ ಸೆಳೆದರು.
ಶಿಕ್ಷಕರಾದ ದಿವ್ಯಾ ಎಂ.ಕೆ,ಉಷಾ ಕೆ.ಎಸ್ ಸಂತೋಷ್ ಮಕ್ಕಳ ಜತೆ ನಾಟಿ ಕಾರ್ಯದಲ್ಲಿ ಸಹಕರಿಸಿದರು. ಶಿಕ್ಷಕ ಮೋಹನ ಗೌಡ ಎ ಸ್ವಾಗತಿಸಿ ಜೆಸಿಂತಾ ಮೊಂತೇರೋ ವಂದಿಸಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…