ಎಣ್ಮೂರು : ಎಣ್ಮೂರು ಸರಕಾರಿ ಪ್ರೌಡಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಅನ್ನ ನೀಡುವ ಭತ್ತದ ಬೇಸಾಯದ ನೇಜಿ ನಾಟಿ ಕುರಿತು ತಿಳುವಳಿಕೆ ನೀಡುವ ಶಿಕ್ಷಣದೊಂದಿಗೆ ನೇಜಿ ಕೃಷಿ ಪಾಠ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಶಾಲಾ ಎಸ್ಡಿಎಂಸಿ ಮಾಜಿ ಅದ್ಯಕ್ಷ ಸೋಮಪ್ಪ ಗೌಡ ಕುಳ್ತಿಗೆ ನೇಜಿ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಅವರು ಭತ್ತದಿಂದ ಅಕ್ಕಿ ತಯಾರಿಸುವ ವಿಧಾನ ಮತ್ತು ಸಾವಯುವ ಜೀನನಾಂಶಕ ಅಕ್ಕಿಯ ಮಹತ್ವದ ಕುರಿತು ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಶೀತಲ್ ಭತ್ತ ಬೇಸಾಯದಲ್ಲಿ ಗದ್ದೆ ಹದಗೊಳಿಸುವ ನಾಟಿ ನೆಡುವ ವಿಧಾನಗಳ ಕುರಿತು ಮಾಹಿತಿ ಒದಗಿಸಿದರು. ಅಕ್ಷರಾ ದಾಸೋಹ ಸಿಬಂದಿಗಳಾದ ಪ್ರೇಮ ಪರ್ಲಡ್ಕ, ಪ್ರಮೀಳಾ ರೈ ಕಸ್ತೂರಿ ಪಾಡ್ದನ ಹಾಡಿ ಬಾಲ ರೈತ ಮಕ್ಕಳ ಗಮನ ಸೆಳೆದರು.
ಶಿಕ್ಷಕರಾದ ದಿವ್ಯಾ ಎಂ.ಕೆ,ಉಷಾ ಕೆ.ಎಸ್ ಸಂತೋಷ್ ಮಕ್ಕಳ ಜತೆ ನಾಟಿ ಕಾರ್ಯದಲ್ಲಿ ಸಹಕರಿಸಿದರು. ಶಿಕ್ಷಕ ಮೋಹನ ಗೌಡ ಎ ಸ್ವಾಗತಿಸಿ ಜೆಸಿಂತಾ ಮೊಂತೇರೋ ವಂದಿಸಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…