ಎಣ್ಮೂರು : ಎಣ್ಮೂರು ಸರಕಾರಿ ಪ್ರೌಡಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಅನ್ನ ನೀಡುವ ಭತ್ತದ ಬೇಸಾಯದ ನೇಜಿ ನಾಟಿ ಕುರಿತು ತಿಳುವಳಿಕೆ ನೀಡುವ ಶಿಕ್ಷಣದೊಂದಿಗೆ ನೇಜಿ ಕೃಷಿ ಪಾಠ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಶಾಲಾ ಎಸ್ಡಿಎಂಸಿ ಮಾಜಿ ಅದ್ಯಕ್ಷ ಸೋಮಪ್ಪ ಗೌಡ ಕುಳ್ತಿಗೆ ನೇಜಿ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಅವರು ಭತ್ತದಿಂದ ಅಕ್ಕಿ ತಯಾರಿಸುವ ವಿಧಾನ ಮತ್ತು ಸಾವಯುವ ಜೀನನಾಂಶಕ ಅಕ್ಕಿಯ ಮಹತ್ವದ ಕುರಿತು ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಶೀತಲ್ ಭತ್ತ ಬೇಸಾಯದಲ್ಲಿ ಗದ್ದೆ ಹದಗೊಳಿಸುವ ನಾಟಿ ನೆಡುವ ವಿಧಾನಗಳ ಕುರಿತು ಮಾಹಿತಿ ಒದಗಿಸಿದರು. ಅಕ್ಷರಾ ದಾಸೋಹ ಸಿಬಂದಿಗಳಾದ ಪ್ರೇಮ ಪರ್ಲಡ್ಕ, ಪ್ರಮೀಳಾ ರೈ ಕಸ್ತೂರಿ ಪಾಡ್ದನ ಹಾಡಿ ಬಾಲ ರೈತ ಮಕ್ಕಳ ಗಮನ ಸೆಳೆದರು.
ಶಿಕ್ಷಕರಾದ ದಿವ್ಯಾ ಎಂ.ಕೆ,ಉಷಾ ಕೆ.ಎಸ್ ಸಂತೋಷ್ ಮಕ್ಕಳ ಜತೆ ನಾಟಿ ಕಾರ್ಯದಲ್ಲಿ ಸಹಕರಿಸಿದರು. ಶಿಕ್ಷಕ ಮೋಹನ ಗೌಡ ಎ ಸ್ವಾಗತಿಸಿ ಜೆಸಿಂತಾ ಮೊಂತೇರೋ ವಂದಿಸಿದರು.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…