ಸುಳ್ಯ: ಹುಟ್ಟಿದ ಪ್ರತಿಯೊಬ್ಬನಲ್ಲೂ ಪ್ರತಿಭೆ ಇದೆ. ಅದನ್ನು ಪ್ರೇರೇಪಿಸುವ ಅಗತ್ಯವಿದೆ. ಚಿತ್ರ ಕಲೆಯುವಿಕೆ ವಿದ್ಯಾರ್ಥಿಗಳ ಸೃಜನ ಶೀಲತೆ ಬೆಳೆಸಲು ಕಾರಣವಾಗುತ್ತದೆ ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ವಾಸುದೇವ ನಡ್ಕ ಅಭಿಪ್ರಾಯಪಟ್ಟಿದ್ದಾರೆ.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುವಿಚಾರ ಸಾಹಿತ್ಯ ವೇದಿಕೆ ಹಾಗೂ ತಾಲೂಕು ಚಿತ್ರಕಲಾ ಶಿಕ್ಷಕರ ಸಂಘ ಇದರ ವತಿಯಿಂದ ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಚಿತ್ರಕಲಾ ಸಂಭ್ರಮ ಹಾಗೂ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅಥಿತಿಗಳಾಗಿ ಕೇರ್ಪಡ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಕ್ಷಯ್ ಆಳ್ವಾ ಭಾಗವಹಿಸಿದ್ದರು. ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಮಹಾಬಲ ಕುಳ ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಮುತ್ತಪ್ಪ ಗೌಡ ಅಧ್ಯಕ್ಷತೆ ವಹಿಸಿದರು. ಎಣ್ಮೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶೀತಲ್ ಯು.ಕೆ ಸ್ವಾಗತಿಸಿದರು. ಸುವಿಚಾರ ಸಾಹಿತ್ಯ ವೇದಿಕೆ ಅಧ್ಯಕ್ಷ ಚಂದ್ರಶೇಖರ್ ಪೆರಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಸಂತೋಷ್ ವಂದಿಸಿದರು. ಮೋಹನ್ ಎಣ್ಮೂರು ಹಾಗೂ ಉಷಾ ಕೆ ಎಸ್ ಕಾರ್ಯಕ್ರಮ ಸಂಯೋಜಿಸಿದರು.
ಸ್ಪರ್ಧಾ ಪಲಿತಾಂಶ
ಪ್ರಾಥಮಿಕ ವಿಭಾಗ: ಪ್ರಥಮ: ಪ್ರಥ್ವಿ ನ್ ಸಹಿಪ್ರಾ ಶಾಲೆ ಪೆರುವಾಜೆ, ದ್ವಿತೀಯ: ನೇಹಾ ಕೆ ಯಸ್ ಜಿ ನಿಂತಿಕಲ್, ತೃತೀಯ: ಮನಸ್ವಿ ರೋಟರಿ ಶಾಲೆ ಸುಳ್ಯ
ಪ್ರೌಢಶಾಲಾ ವಿಭಾಗ: ಪ್ರಥಮ: ಕನ್ನಿಕಾ ಅಂಬೆಕಲ್ಲು, ರೋಟರಿ ಶಾಲೆ, ದ್ವಿತೀಯ: ಸಂಜನಾ ಕೆಕೆ ರೋಟರಿ ಶಾಲೆ, ತೃತೀಯ: ದುಷ್ಯಂತ ಸಿ ಸ ಪ್ರೌ ಶಾಲೆ ಪಂಜ
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490