ಸುಳ್ಯ: ಹುಟ್ಟಿದ ಪ್ರತಿಯೊಬ್ಬನಲ್ಲೂ ಪ್ರತಿಭೆ ಇದೆ. ಅದನ್ನು ಪ್ರೇರೇಪಿಸುವ ಅಗತ್ಯವಿದೆ. ಚಿತ್ರ ಕಲೆಯುವಿಕೆ ವಿದ್ಯಾರ್ಥಿಗಳ ಸೃಜನ ಶೀಲತೆ ಬೆಳೆಸಲು ಕಾರಣವಾಗುತ್ತದೆ ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ವಾಸುದೇವ ನಡ್ಕ ಅಭಿಪ್ರಾಯಪಟ್ಟಿದ್ದಾರೆ.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುವಿಚಾರ ಸಾಹಿತ್ಯ ವೇದಿಕೆ ಹಾಗೂ ತಾಲೂಕು ಚಿತ್ರಕಲಾ ಶಿಕ್ಷಕರ ಸಂಘ ಇದರ ವತಿಯಿಂದ ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಚಿತ್ರಕಲಾ ಸಂಭ್ರಮ ಹಾಗೂ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅಥಿತಿಗಳಾಗಿ ಕೇರ್ಪಡ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಕ್ಷಯ್ ಆಳ್ವಾ ಭಾಗವಹಿಸಿದ್ದರು. ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಮಹಾಬಲ ಕುಳ ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಮುತ್ತಪ್ಪ ಗೌಡ ಅಧ್ಯಕ್ಷತೆ ವಹಿಸಿದರು. ಎಣ್ಮೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶೀತಲ್ ಯು.ಕೆ ಸ್ವಾಗತಿಸಿದರು. ಸುವಿಚಾರ ಸಾಹಿತ್ಯ ವೇದಿಕೆ ಅಧ್ಯಕ್ಷ ಚಂದ್ರಶೇಖರ್ ಪೆರಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಸಂತೋಷ್ ವಂದಿಸಿದರು. ಮೋಹನ್ ಎಣ್ಮೂರು ಹಾಗೂ ಉಷಾ ಕೆ ಎಸ್ ಕಾರ್ಯಕ್ರಮ ಸಂಯೋಜಿಸಿದರು.
ಸ್ಪರ್ಧಾ ಪಲಿತಾಂಶ
ಪ್ರಾಥಮಿಕ ವಿಭಾಗ: ಪ್ರಥಮ: ಪ್ರಥ್ವಿ ನ್ ಸಹಿಪ್ರಾ ಶಾಲೆ ಪೆರುವಾಜೆ, ದ್ವಿತೀಯ: ನೇಹಾ ಕೆ ಯಸ್ ಜಿ ನಿಂತಿಕಲ್, ತೃತೀಯ: ಮನಸ್ವಿ ರೋಟರಿ ಶಾಲೆ ಸುಳ್ಯ
ಪ್ರೌಢಶಾಲಾ ವಿಭಾಗ: ಪ್ರಥಮ: ಕನ್ನಿಕಾ ಅಂಬೆಕಲ್ಲು, ರೋಟರಿ ಶಾಲೆ, ದ್ವಿತೀಯ: ಸಂಜನಾ ಕೆಕೆ ರೋಟರಿ ಶಾಲೆ, ತೃತೀಯ: ದುಷ್ಯಂತ ಸಿ ಸ ಪ್ರೌ ಶಾಲೆ ಪಂಜ
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…