ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ 2019-20ನೇ ಸಾಲಿನ ಘಟಕದ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
2018-19ನೇ ಸಾಲಿನ ಘಟಕ ನಾಯಕರುಗಳಾದ ದೀಕ್ಷಿತ್ ಕೆ ಪಿ ಹಾಗೂ ನಳಿನಿ ಎಂ 2019-20ನೇ ಸಾಲಿನ ನಾಯಕರುಗಳಾದ ಭುವನ್ ಪಿ ಹಾಗೂ ಕುಮುದಾ ಬಿ ಎಸ್ರವರಿಗೆ, ಉಪನಾಯಕರಾದ ಶರಣ್ಎಸ್ ಹಾಗೂ ಚೈತ್ರಾ ಎಂ ಪಿ, ಬ್ರಿಜೇಶ್ ಕೆ ಹಾಗೂ ಮಹೇಶ್ವರಿ ಪಿ ಯವರಿಗೆ ಅಧಿಕಾರ ಹಸ್ತಾಂತರಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಕೆ ಗಿರಿಧರ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಆರಕ್ಷಕ ಠಾಣೆಯ ಪ್ರೊಬೇಷನರಿ ಪೋಲೀಸ್ ಉಪನಿರೀಕ್ಷಕ ಆಂಜನೇಯ ರೆಡ್ಡಿ, ಸುಳ್ಯದ ಕೆವಿಜಿ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಉದಯಕೃಷ್ಣ ಬಿ., ಪ್ರೊಬೇಷನರಿ ಪೋಲೀಸ್ ಉಪನಿರೀಕ್ಷಕ ಸಂತೋಷ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕಾರ್ಯಾಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕಿ ರತ್ನಾವತಿ ಡಿ. ಹಾಗೂ ಹಿರಿಯ ರೆಡ್ಕ್ರಾಸ್ ಸದಸ್ಯರು ಉಪಸ್ಥಿತರಿದ್ದರು.
ತೇಜಸ್ವಿನಿ, ಮೌನ, ಸಿಂಚನಾ ಪಿ. ಎಂ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಪಲ್ಲವಿ ಸ್ವಾಗತಿಸಿ ಮೌನ ವಂದಿಸಿದರು. ಜಯಮಾಲ ಕಾರ್ಯಕ್ರಮ ನಿರೂಪಿಸಿದರು.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…