ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ 2019-20ನೇ ಸಾಲಿನ ಘಟಕದ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
2018-19ನೇ ಸಾಲಿನ ಘಟಕ ನಾಯಕರುಗಳಾದ ದೀಕ್ಷಿತ್ ಕೆ ಪಿ ಹಾಗೂ ನಳಿನಿ ಎಂ 2019-20ನೇ ಸಾಲಿನ ನಾಯಕರುಗಳಾದ ಭುವನ್ ಪಿ ಹಾಗೂ ಕುಮುದಾ ಬಿ ಎಸ್ರವರಿಗೆ, ಉಪನಾಯಕರಾದ ಶರಣ್ಎಸ್ ಹಾಗೂ ಚೈತ್ರಾ ಎಂ ಪಿ, ಬ್ರಿಜೇಶ್ ಕೆ ಹಾಗೂ ಮಹೇಶ್ವರಿ ಪಿ ಯವರಿಗೆ ಅಧಿಕಾರ ಹಸ್ತಾಂತರಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಕೆ ಗಿರಿಧರ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಆರಕ್ಷಕ ಠಾಣೆಯ ಪ್ರೊಬೇಷನರಿ ಪೋಲೀಸ್ ಉಪನಿರೀಕ್ಷಕ ಆಂಜನೇಯ ರೆಡ್ಡಿ, ಸುಳ್ಯದ ಕೆವಿಜಿ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಉದಯಕೃಷ್ಣ ಬಿ., ಪ್ರೊಬೇಷನರಿ ಪೋಲೀಸ್ ಉಪನಿರೀಕ್ಷಕ ಸಂತೋಷ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕಾರ್ಯಾಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕಿ ರತ್ನಾವತಿ ಡಿ. ಹಾಗೂ ಹಿರಿಯ ರೆಡ್ಕ್ರಾಸ್ ಸದಸ್ಯರು ಉಪಸ್ಥಿತರಿದ್ದರು.
ತೇಜಸ್ವಿನಿ, ಮೌನ, ಸಿಂಚನಾ ಪಿ. ಎಂ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಪಲ್ಲವಿ ಸ್ವಾಗತಿಸಿ ಮೌನ ವಂದಿಸಿದರು. ಜಯಮಾಲ ಕಾರ್ಯಕ್ರಮ ನಿರೂಪಿಸಿದರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…