ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವರೆಡ್ಕ್ರಾಸ್ ಘಟಕದ ವತಿಯಿಂದಅರಣ್ಯ ಇಲಾಖೆ, ಸುಳ್ಯ ಇವರ ಸಹಯೋಗದೊಂದಿಗೆ ವಿಶ್ವಪರಿಸರ ದಿನಾಚರಣೆ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮವನ್ನು ಸರಕಾರಿ ಪ್ರೌಢ ಶಾಲೆ ಅಜ್ಜಾವರದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು.
ಕಾಲೇಜಿನ ಯುವರೆಡ್ಕ್ರಾಸ್ ಘಟಕದ ಸುಮಾರು 70 ವಿದ್ಯಾರ್ಥಿಗಳು, ಕಾರ್ಯಕ್ರಮಾಧಿಕಾರಿ ಡಾ| ಅನುರಾಧಾ ಕುರುಂಜಿಯವರ ನೇತೃತ್ವದಲ್ಲಿ ಅಜ್ಜಾವರ ಪರಸರದಲ್ಲಿ ಗಿಡಗಳನ್ನು ನೆಡುವಮೂಲಕ ವಿಶ್ವಪರಿಸರದಿನವನ್ನು ಆಚರಿಸಿದರು.ಸರಕಾರಿ ಪ್ರೌಢ ಶಾಲೆ, ಅಜ್ಜಾವರದ ಮುಖ್ಯೋಪಾಧ್ಯಾರಾದ ನಾಗರಾಜ ಅವರುಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪರಿಸರವನ್ನು ನಾವು ಕಾಪಾಡಿಕೊಳ್ಳದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ನೀರು ಹಾಗೂ ಶುದ್ಧ ಗಾಳಿಯಅಭಾವಅತೀವವಾಗಿ ನಮ್ಮನ್ನುಕಾಡಲಿದೆ. ಬೆಂಗಳೂರಲ್ಲಿ ಆಕ್ಸಿಜನ್ ಕ್ಲಬ್ಗಳು ಈಗಾಗಲೇ ಆರಂಭವಾಗಿವೆ. ದುಡ್ಡುಕೊಟ್ಟು ಗಾಳಿ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ. ಗಿಡವನ್ನು ನೆಟ್ಟು ಪೋಷಿಸಿದರೆ ಮುಂದಿನ ತಲೆಮಾರಿಗೆ ಒಳ್ಳೆಯ ಪರಿಸರವನ್ನುಕೊಡಬಹುದುಎನ್ನುವ ನಿಟ್ಟಿನಲ್ಲಿಇಂತಹ ಕಾರ್ಯಕ್ರಮಗಳು ಹೆಚ್ಚು ಪರಿಣಾಮಕಾರಿಯಾಗಿಆಯೋಜನೆಯಾಗಬೇಕುಎಂದರು.
ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ಅರಣ್ಯಇಲಾಖೆಯ ಉಪ ವಲಯಅರಣ್ಯಾಧಿಕಾರಿ ಯಶೋಧರ ಅವರು ಮಾತನಾಡಿ, ಒಂದುಗಿಡವನ್ನು ನೆಟ್ಟರೆಅದು ಮನುಷ್ಯನ ಬದುಕಿನಲ್ಲಿ ನಾಲ್ಕು ಕೋಟಿ ಬೆಲೆಯನ್ನು ಬಾಳುತ್ತದೆ. ಗಿಡಗಳ ಪ್ರಾಮುಖ್ಯತೆಯನ್ನುಅರಿತುಅದನ್ನು ನೆಟ್ಟು ಪೋಷಿಸಿ, ಬೆಳೆಸುವ ಕಾಯಕದಲ್ಲಿತಮ್ಮನ್ನುತಾವು ತೊಡಗಿಸಿಕೊಳ್ಳಿ. ಮಕ್ಕಳಿಗೆ ಪರಿಸರ ಕಾಳಜಿ ಮೂಡಿಸುವತಮ್ಮ ಕೆಲಸ ಶ್ಲಾಘನೀಯಎಂದರು.
ಕಾರ್ಯಕ್ರಮಾಧಿಕಾರಿಡಾ| ಅನುರಾಧಾಕುರುಂಜಿಯವರು ಮಾತನಾಡಿಅರಣ್ಯಗಳು ನಾಶವಾಗಿ ಕಾಂಕ್ರೀಟೀಕರಣಗೊಳ್ಳುತ್ತಿರುವ ಇಂದಿನ ದಿನಗಳಲ್ಲಿ ಮರದ ಪ್ರಾಮುಖ್ಯತೆಯನ್ನು ತಿಳಿಸುವ ಮತ್ತು ಆ ಮೂಲಕ ಪರಿಸರವನ್ನು ಉಳಿಸುವ ಕೆಲಸ ಮಕ್ಕಳಿಂದಾಗಬೇಕು ಎನ್ನುವನಿಟ್ಟಿನಲ್ಲಿಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದೇವೆ ಎಂದರು.
ಅಜ್ಜಾವರದಅರಣ್ಯರಕ್ಷಕ ದಿವೀಶ್ ಕೆ, ಸರಕಾರಿ ಪ್ರೌಢ ಶಾಲೆಅಜ್ಜಾವರದಎಸ್ಡಿಎಂಸಿ ಅಧ್ಯಕ್ಷಸುಂದರ, ಕಾಲೇಜಿನ ಹಿಂದಿ ವಿಭಾಗದಉಪನ್ಯಾಸಕ ಮನೋಜ್ಕುಮಾರ್, ಅರಣ್ಯಇಲಾಖೆಯ ಶ್ರೀಧರ್ ಹಾಗೂ ಸಿಬ್ಬಂದಿಗಳು, ರೆಡ್ಕ್ರಾಸ್ಘಟಕದನಾಯಕರುಗಳಾದ ಭುವನ್ ಪಿ, ಕುಮುದಾ ಪಿ. ಎಸ್, ಬ್ರಿಜೇಶ್ ಕೆ ಮೊದಲಾದವರುಉಪಸ್ಥಿತರಿದ್ದರು. ಸ್ವಾತಿ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿ ಅಕ್ಷತಾ ವಂದಿಸಿದರು.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…