ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ರೋವರ್ ಮತ್ತು ರೇಂಜರ್ ಘಟಕದ ವತಿಯಿಂದ ಅಭಿವಿನ್ಯಾಸ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ರುದ್ರಕುಮಾರ್ ವಹಿಸಿದ್ದರು. ಪುತ್ತೂರಿನ ಶ್ರೀ ರಾಮಕೃಷ್ಣ ವಿದ್ಯಾ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಮತ್ತು ಗೈಡ್ ಲೀಡರ್ ಶ್ರೀಮತಿ ಸುನೀತಾ ಎಂ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಭಾರತ ಸ್ಕೌಟ್ ಗೈಡ್ ಧ್ವಜಾರೋಹಣದ ನಿಯಮಗಳನ್ನು, ಪ್ರವೇಶ, ನಿಪುಣ್, ರಾಜ್ಯ ಪುರಸ್ಕಾರ್ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ರೋವರ್ಸ್ ಕಾರ್ಯಕ್ರಮಾಧಿಕಾರಿ ತಿಪ್ಪೇಸ್ವಾಮಿ ಡಿ ಎಚ್, ರೇಂಜರ್ಸ್ ಕಾರ್ಯಕ್ರಮಾಧಿಕಾರಿ ಹರ್ಷಕಿರಣ ಉಪಸ್ಥಿತರಿದ್ದರು. ಪ್ರತೀಕ್ಷಾ ಸ್ವಾಗತಿಸಿ, ಇಜಾಸ್ ವಂದಿಸಿದರು. ಪ್ರಮೀತಾ ಕಾರ್ಯಕ್ರಮ ನಿರೂಪಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel