Advertisement
ಸುದ್ದಿಗಳು

ಎನ್ನೆಂಸಿ: ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಲು ಪ್ರೇರಣಾ 2019

Share

ಸುಳ್ಯ: ಶಿಕ್ಷಣ ಮತ್ತು ಜೀವನದಲ್ಲಿ ಆಧುನಿಕತೆಯನ್ನು ಬಳಸಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳು ಪಠ್ಯಕ್ರಮದ ಜೊತೆಗೆ ಇತರೆ ಮೌಲ್ಯಯುತವಾದ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಲು ಪ್ರೇರಣಾ 2019ನ್ನು ಆಯೋಜಿಸಿರುವಂತದು ಎಂದು ಅಕಾಡೆಮಿ ಆಫ್‍ ಲಿಬರಲ್‍ ಎಜ್ಯುಕೇಷನ್‍ನ ಅಧ್ಯಕ್ಷ ಡಾ. ಕೆ ವಿ ಚಿದಾನಂದ ಅಭಿಪ್ರಾಯಪಟ್ಟರು.

ಅವರು ಸುಳ್ಯದ ನೆಹರೂ ಮೆಮೋರಿಯಲ್‍ ಕಾಲೇಜಿನ ಸಮಾಜಕಾರ್ಯ ವಿಭಾಗದಿಂದ ಹಮ್ಮಿಕೊಂಡ ರಾಜ್ಯ ಮಟ್ಟದ ಸಮಾಜಕಾರ್ಯ ಉತ್ಸವ “ಪ್ರೇರಣಾ 2019” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕಾರ್ಯಕ್ರಮವನ್ನು ಡಾ. ಕೆ ವಿ ಚಿದಾನಂದರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಬಳಿಕ ಭಾಗವಹಿಸಿದ ಎಲ್ಲಾ ಕಾಲೇಜಿನ ನಾಯಕ-ನಾಯಕಿಯರು ಹಣತೆಯನ್ನು ಬೆಳಗಿಸಿ ಚಾಲನೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಕೆ ಗಿರಿಧರ ಗೌಡ, ಕ್ಯಾಂಪಸ್ ವಿದ್ಯಾರ್ಥಿಕ್ಷೇಮ ಪಾಲನಾಧಿಕಾರಿ ಪ್ರೊ. ಜವರೇಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಮಧುರಾ ಎಂ ಆರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಮಾಜಕಾರ್ಯ ವೇದಿಕೆ ಸಂಚಾಲಕಿ ಶ್ರೀಮತಿ ಶೋಭಾ ಎ ಸ್ವಾಗತಿಸಿ, ಸಮಾಜಕಾರ್ಯ ವೇದಿಕೆ ವಿದ್ಯಾರ್ಥಿ ನಾಯಕ ದೀಕ್ಷಿತ್ ಕೆ ಪಿ ವಂದಿಸಿದರು. ವಿದ್ಯಾರ್ಥಿಗಳಾದ ತೇಜಸ್ ಕೆ ಕೆ, ಅರ್ಪಣಾ, ಮೌನವಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶ್ರೀಮತಿ ಕೃಪಾ ಎ ಎನ್ ಮತ್ತು ಹೇಮಂತ್‍ ಎನ್ ಎ ಉಪಸ್ಥಿತರಿದ್ದರು. ಸುಳ್ಯ ಮತ್ತು ಮಡಿಕೇರಿ ತಾಲೂಕಿನ 13 ಪದವಿಪೂರ್ವ ಕಾಲೇಜಿನ 200ಕ್ಕೂ ಅಧಿಕ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನುಕಾಲೇಜಿನ ಪ್ರಾಂಶುಪಾಲ ಡಾ. ಕೆ ಗಿರಿಧರ ಗೌಡ ವಹಿಸಿದ್ದರು. ಪ್ರೊ. ಬಾಲಚಂದ್ರಗೌಡ, ಚಂದ್ರ ಕೋಲ್ಚಾರ್, ಭವಾನಿ ಶಂಕರ ಅಡ್ತಲೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಾಜಕಾರ್ಯ ವೇದಿಕೆ ಸಂಚಾಲಕಿ ಶ್ರೀಮತಿ ಶೋಭಾ ಎ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉಪನ್ಯಾಸಕಿ ಕೃಪಾ ಎ ಎನ್ ಸ್ವಾಗತಿಸಿ, ಮಧುರಾ ಎಂ ಆರ್ ವಂದಿಸಿದರು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘ ಮತ್ತುರಕ್ಷಕ – ಶಿಕ್ಷಕ ಸಂಘದ ವತಿಯಿಂದ ಸಮಾಜಕಾರ್ಯ ವಿಭಾಗಕ್ಕೆ ಬೀದಿ ನಾಟಕ ಸಮವಸ್ತ್ರವನ್ನು ಹಸ್ತಾಂತರಿಸಲಾಯಿತು.

ಸ್ಪರ್ಧೆಯಲ್ಲಿ ಸಂಪಾಜೆ ಪದವಿಪೂರ್ವ ಕಾಲೇಜು ಅತ್ಯಧಿಕ ಅಂಕಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಪ್ರೊ. ಬಾಲಚಂದ್ರಗೌಡ ಬಹುಮಾನ ವಿತರಿಸಿದರು. ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಸ್ಪರ್ಧೆಯ ತೀರ್ಪುಗಾರರಾಗಿ ನೊಡೆಲ್‍ ಅಧಿಕಾರಿ ಸುಬ್ರಮಣಿ, ಎನ್ನೆಂಸಿ ಉಪನ್ಯಾಸಕಿ ಪ್ರಣೀತಾ, ಚಂದನಾ, ಇನ್ನರ್‍ವ್ಹೀಲ್ ಸದಸ್ಯೆ ಶ್ರೀಮತಿ ಯೋಗಿತಾ ಗೋಪಿನಾಥ್, ಶ್ರೀಮತಿ ಶೈಲಿ ಪ್ರಭಾಕರ್, ಎನ್ನೆಂಸಿ ಉಪನ್ಯಾಸಕಿ ಶ್ರೀಮತಿ ಅಶ್ವಿನಿ, ಮನೋರೋಗ ತಜ್ಞೆ ಡಾ. ಪೂನಂ ಸಹಕರಿಸಿದರು. ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಂಘಟಕರಾಗಿ ಕಾರ್ಯ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

13 minutes ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

1 hour ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

1 hour ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

7 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

9 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

13 hours ago