ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘವು ನವೆಂಬರ್ 15ರಂದು ಸುಳ್ಯ ಎನ್ನೆಂಸಿಯಲ್ಲಿ ಹಳೆ ವಿದಾರ್ಥಿಗಳ ಮಹಾ ಸಂಗಮವನ್ನು ಹಮ್ಮಿಕೊಂಡಿದೆ. ಅಂದು ಎನ್ನೆಂಸಿಯ ಗೌರವ ಸಂದರ್ಶಕ ಪ್ರಾಧ್ಯಾಪಕರು ಡಾ. ಪ್ರಭಾಕರ ಶಿಶಿಲರ ಆತ್ಮಕಥನ ಬೊಗಸೆ ತುಂಬಾ ಕನಸು ಬಿಡುಗಡೆಯಾಗಲಿದೆ.
ಕಾರ್ಯಕ್ರಮದಲ್ಲಿ ಡಾ| ಮೋಹನ ಆಳ್ವ, ಡಾ| ಪುರುಷೋತ್ತಮ ಬಿಳಿಮಲೆ, ಡಾ| ಯಶೋವರ್ಮ ಮತ್ತು ಡಾ. ಕೆ.ವಿ. ಚಿದಾನಂದ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ. ಈ ಬಗ್ಗೆ ಕಾರ್ಯಕ್ರಮ ನಿಗದಿಗೆ ಅಕ್ಟೋಬರ್ 15ರಂದು ಮಂಗಳವಾರ ಅಪರಾಹ್ನ ಗಂಟೆ 3ಕ್ಕೆ ಸುಳ್ಯ ಎನ್ನೆಂಸಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ ನಡೆಯಲಿದೆ. ಎಲ್ಲಾ ಹಿರಿಯ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಂಡು ಸಲಹೆ ಸೂಚನೆ ನೀಡಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಡಬೇಕಾಗಿ ಎನ್ನೆಂಸಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಚಂದ್ರ ಕೋಲ್ಚಾರ್, ಕಾರ್ಯದರ್ಶಿ ಕೆ.ಟಿ. ವಿಶ್ವನಾಥ, ಮತ್ತು ಕೋಶಾಧಿಕಾರಿ ಶಿವರಾಮ ಕೇರ್ಪಳ ತಿಳಿಸಿದ್ದಾರೆ.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…