ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘವು ನವೆಂಬರ್ 15ರಂದು ಸುಳ್ಯ ಎನ್ನೆಂಸಿಯಲ್ಲಿ ಹಳೆ ವಿದಾರ್ಥಿಗಳ ಮಹಾ ಸಂಗಮವನ್ನು ಹಮ್ಮಿಕೊಂಡಿದೆ. ಅಂದು ಎನ್ನೆಂಸಿಯ ಗೌರವ ಸಂದರ್ಶಕ ಪ್ರಾಧ್ಯಾಪಕರು ಡಾ. ಪ್ರಭಾಕರ ಶಿಶಿಲರ ಆತ್ಮಕಥನ ಬೊಗಸೆ ತುಂಬಾ ಕನಸು ಬಿಡುಗಡೆಯಾಗಲಿದೆ.
ಕಾರ್ಯಕ್ರಮದಲ್ಲಿ ಡಾ| ಮೋಹನ ಆಳ್ವ, ಡಾ| ಪುರುಷೋತ್ತಮ ಬಿಳಿಮಲೆ, ಡಾ| ಯಶೋವರ್ಮ ಮತ್ತು ಡಾ. ಕೆ.ವಿ. ಚಿದಾನಂದ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ. ಈ ಬಗ್ಗೆ ಕಾರ್ಯಕ್ರಮ ನಿಗದಿಗೆ ಅಕ್ಟೋಬರ್ 15ರಂದು ಮಂಗಳವಾರ ಅಪರಾಹ್ನ ಗಂಟೆ 3ಕ್ಕೆ ಸುಳ್ಯ ಎನ್ನೆಂಸಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ ನಡೆಯಲಿದೆ. ಎಲ್ಲಾ ಹಿರಿಯ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಂಡು ಸಲಹೆ ಸೂಚನೆ ನೀಡಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಡಬೇಕಾಗಿ ಎನ್ನೆಂಸಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಚಂದ್ರ ಕೋಲ್ಚಾರ್, ಕಾರ್ಯದರ್ಶಿ ಕೆ.ಟಿ. ವಿಶ್ವನಾಥ, ಮತ್ತು ಕೋಶಾಧಿಕಾರಿ ಶಿವರಾಮ ಕೇರ್ಪಳ ತಿಳಿಸಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…