ಸುದ್ದಿಗಳು

ಎನ್.ಆರ್.ಸಿ. ಮತ್ತು ಸಿ.ಎ.ಎ. ವಿರುದ್ಧ ಜ.2ರಂದು ಸುಳ್ಯದಲ್ಲಿ ಪ್ರತಿಭಟನಾ ಸಭೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕೇಂದ್ರ ಸರಕಾರ ದೇಶಾದ್ಯಂತ ಜಾರಿಗೆ ತರಲು ಉದ್ದೇಶಿಸಿರುವ ಎನ್.ಆರ್.ಸಿ. ಮತ್ತು ಸಿ.ಎ.ಎ. ವಿರುದ್ಧ ಜನಾಂದೋಲನ ಮತ್ತು ಸಾರ್ವಜನಿಕ ಪ್ರತಿಭಟನಾ ಸಭೆಯು ಜ.2ರಂದು ಅಪರಾಹ್ನ 3ಕ್ಕೆ ಸುಳ್ಯದ ಗಾಂಧೀನಗರದಲ್ಲಿ ನಡೆಯಲಿದೆ ಎಂದು ಸುಳ್ಯ ತಾಲೂಕು ಮುಸ್ಲಿಂ ಹಿತರಕ್ಷಣಾ ವೇದಿಕೆಯ ಸಂಚಾಲಕ ಮಹಮ್ಮದ್ ಇಕ್ಬಾಲ್ ಎಲಿಮಲೆ ತಿಳಿಸಿದ್ದಾರೆ.

Advertisement
Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದ ಮುಸ್ಲೀಂ ಸಮುದಾಯವನ್ನು ಗುರಿಯಾಗಿರಿಸಿ ಜಾರಿಗೆ ತರಲು ಉದ್ದೇಶಿಸಿರುವ ಎನ್.ಆರ್.ಸಿ. ಮತ್ತು ಸಿ.ಎ.ಎ ಕರಾಳ ಕಾಯಿದೆಯಾಗಿದ್ದು, ಇದರ ವಿರುದ್ಧ ಸುಳ್ಯ ತಾಲೂಕು ವ್ಯಾಪ್ತಿಯ ಎಲ್ಲಾ ಮೊಹಲ್ಲಾಗಳ ಜಮಾಅತ್ ಸದಸ್ಯರನ್ನೊಳಗೊಂಡು ವಿವಿಧ ಮುಸ್ಲಿಂ ಸಂಘಟನೆಗಳ ಮತ್ತು ಸಮಾನ ಮನಸ್ಕ ಸಹಧರ್ಮಿಯರ ಹಾಗೂ ಎಲ್ಲಾ ಜಾತ್ಯಾತೀತ ಪಕ್ಷಗಳ ಸರ್ವ ರೀತಿಯ ಸಹಕಾರ ಮತ್ತು ಸಹಭಾಗಿತ್ವದೊಂದಿಗೆ ಸುಳ್ಯ ತಾಲೂಕು ಮುಸ್ಲಿಂ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ತಾಲೂಕಿನ ವಿವಿಧ ಭಾಗಗಳಿಂದ ಜನರು ಭಾಗವಹಿಸಿ, ದೇಶದ ಸಂವಿಧಾನದ ಉಳಿವಿಗಾಗಿ ಹಕ್ಕೊತ್ತಾಯ ಮಂಡಿಸಲಿದ್ದಾರೆ ಎಂದು ಅವರು ಹೇಳಿದರು.

ಪ್ರತಿಭಟನಾ ಸಭೆಯ ದಿನ ಸುಳ್ಯದ ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬೆಂಬಲ ನೀಡಬೇಕೆಂದು ಅವರು ವಿನಂತಿಸಿದ್ದಾರೆ. ಪ್ರತಿಭಟನಾ ಸಭೆಯ ಬಳಿಕ ಸುಳ್ಯ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಅಧ್ಯಕ್ಷ ಇಸಾಕ್ ಸಾಹೇಬ್ ಪಾಜಪಳ್ಳ, ಪ್ರಮುಖರಾದ ಕೆ.ಎಂ.ಮುಸ್ತಫ, ಪಿ.ಎ.ಮಹಮ್ಮದ್, ಮಹಮ್ಮದ್ ಕುಂಞ ಗೂನಡ್ಕ, ಆರ್.ಕೆ.ಮಹಮ್ಮದ್, ಕೆ.ಎಸ್.ಉಮ್ಮರ್, ರಶೀದ್ ಜಟ್ಟಿಪಳ್ಳ, ಮೂಸಾ ಕುಂಞ ಪೈಂಬೆಚ್ಚಾಲು, ಡಿ.ಎಂ.ಶಾರಿಕ್,ಅಬ್ದುಲ್ ಮಜೀದ್, ರಫೀಕ್ ಪಡು, ಅಬೂಬಕ್ಕರ್ ಅಡ್ಕಾರ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

2 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

3 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

6 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

6 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

6 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago