Advertisement
ಸುದ್ದಿಗಳು

ಎನ್.ಆರ್.ಸಿ. ಮತ್ತು ಸಿ.ಎ.ಎ. ವಿರುದ್ಧ ಜ.2ರಂದು ಸುಳ್ಯದಲ್ಲಿ ಪ್ರತಿಭಟನಾ ಸಭೆ

Share

ಸುಳ್ಯ: ಕೇಂದ್ರ ಸರಕಾರ ದೇಶಾದ್ಯಂತ ಜಾರಿಗೆ ತರಲು ಉದ್ದೇಶಿಸಿರುವ ಎನ್.ಆರ್.ಸಿ. ಮತ್ತು ಸಿ.ಎ.ಎ. ವಿರುದ್ಧ ಜನಾಂದೋಲನ ಮತ್ತು ಸಾರ್ವಜನಿಕ ಪ್ರತಿಭಟನಾ ಸಭೆಯು ಜ.2ರಂದು ಅಪರಾಹ್ನ 3ಕ್ಕೆ ಸುಳ್ಯದ ಗಾಂಧೀನಗರದಲ್ಲಿ ನಡೆಯಲಿದೆ ಎಂದು ಸುಳ್ಯ ತಾಲೂಕು ಮುಸ್ಲಿಂ ಹಿತರಕ್ಷಣಾ ವೇದಿಕೆಯ ಸಂಚಾಲಕ ಮಹಮ್ಮದ್ ಇಕ್ಬಾಲ್ ಎಲಿಮಲೆ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದ ಮುಸ್ಲೀಂ ಸಮುದಾಯವನ್ನು ಗುರಿಯಾಗಿರಿಸಿ ಜಾರಿಗೆ ತರಲು ಉದ್ದೇಶಿಸಿರುವ ಎನ್.ಆರ್.ಸಿ. ಮತ್ತು ಸಿ.ಎ.ಎ ಕರಾಳ ಕಾಯಿದೆಯಾಗಿದ್ದು, ಇದರ ವಿರುದ್ಧ ಸುಳ್ಯ ತಾಲೂಕು ವ್ಯಾಪ್ತಿಯ ಎಲ್ಲಾ ಮೊಹಲ್ಲಾಗಳ ಜಮಾಅತ್ ಸದಸ್ಯರನ್ನೊಳಗೊಂಡು ವಿವಿಧ ಮುಸ್ಲಿಂ ಸಂಘಟನೆಗಳ ಮತ್ತು ಸಮಾನ ಮನಸ್ಕ ಸಹಧರ್ಮಿಯರ ಹಾಗೂ ಎಲ್ಲಾ ಜಾತ್ಯಾತೀತ ಪಕ್ಷಗಳ ಸರ್ವ ರೀತಿಯ ಸಹಕಾರ ಮತ್ತು ಸಹಭಾಗಿತ್ವದೊಂದಿಗೆ ಸುಳ್ಯ ತಾಲೂಕು ಮುಸ್ಲಿಂ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ತಾಲೂಕಿನ ವಿವಿಧ ಭಾಗಗಳಿಂದ ಜನರು ಭಾಗವಹಿಸಿ, ದೇಶದ ಸಂವಿಧಾನದ ಉಳಿವಿಗಾಗಿ ಹಕ್ಕೊತ್ತಾಯ ಮಂಡಿಸಲಿದ್ದಾರೆ ಎಂದು ಅವರು ಹೇಳಿದರು.

ಪ್ರತಿಭಟನಾ ಸಭೆಯ ದಿನ ಸುಳ್ಯದ ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬೆಂಬಲ ನೀಡಬೇಕೆಂದು ಅವರು ವಿನಂತಿಸಿದ್ದಾರೆ. ಪ್ರತಿಭಟನಾ ಸಭೆಯ ಬಳಿಕ ಸುಳ್ಯ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಅಧ್ಯಕ್ಷ ಇಸಾಕ್ ಸಾಹೇಬ್ ಪಾಜಪಳ್ಳ, ಪ್ರಮುಖರಾದ ಕೆ.ಎಂ.ಮುಸ್ತಫ, ಪಿ.ಎ.ಮಹಮ್ಮದ್, ಮಹಮ್ಮದ್ ಕುಂಞ ಗೂನಡ್ಕ, ಆರ್.ಕೆ.ಮಹಮ್ಮದ್, ಕೆ.ಎಸ್.ಉಮ್ಮರ್, ರಶೀದ್ ಜಟ್ಟಿಪಳ್ಳ, ಮೂಸಾ ಕುಂಞ ಪೈಂಬೆಚ್ಚಾಲು, ಡಿ.ಎಂ.ಶಾರಿಕ್,ಅಬ್ದುಲ್ ಮಜೀದ್, ರಫೀಕ್ ಪಡು, ಅಬೂಬಕ್ಕರ್ ಅಡ್ಕಾರ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 hour ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 hour ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

12 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

12 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

12 hours ago