ಸುಳ್ಯ: ಕೇಂದ್ರ ಸರಕಾರ ದೇಶಾದ್ಯಂತ ಜಾರಿಗೆ ತರಲು ಉದ್ದೇಶಿಸಿರುವ ಎನ್.ಆರ್.ಸಿ. ಮತ್ತು ಸಿ.ಎ.ಎ. ವಿರುದ್ಧ ಜನಾಂದೋಲನ ಮತ್ತು ಸಾರ್ವಜನಿಕ ಪ್ರತಿಭಟನಾ ಸಭೆಯು ಜ.2ರಂದು ಅಪರಾಹ್ನ 3ಕ್ಕೆ ಸುಳ್ಯದ ಗಾಂಧೀನಗರದಲ್ಲಿ ನಡೆಯಲಿದೆ ಎಂದು ಸುಳ್ಯ ತಾಲೂಕು ಮುಸ್ಲಿಂ ಹಿತರಕ್ಷಣಾ ವೇದಿಕೆಯ ಸಂಚಾಲಕ ಮಹಮ್ಮದ್ ಇಕ್ಬಾಲ್ ಎಲಿಮಲೆ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದ ಮುಸ್ಲೀಂ ಸಮುದಾಯವನ್ನು ಗುರಿಯಾಗಿರಿಸಿ ಜಾರಿಗೆ ತರಲು ಉದ್ದೇಶಿಸಿರುವ ಎನ್.ಆರ್.ಸಿ. ಮತ್ತು ಸಿ.ಎ.ಎ ಕರಾಳ ಕಾಯಿದೆಯಾಗಿದ್ದು, ಇದರ ವಿರುದ್ಧ ಸುಳ್ಯ ತಾಲೂಕು ವ್ಯಾಪ್ತಿಯ ಎಲ್ಲಾ ಮೊಹಲ್ಲಾಗಳ ಜಮಾಅತ್ ಸದಸ್ಯರನ್ನೊಳಗೊಂಡು ವಿವಿಧ ಮುಸ್ಲಿಂ ಸಂಘಟನೆಗಳ ಮತ್ತು ಸಮಾನ ಮನಸ್ಕ ಸಹಧರ್ಮಿಯರ ಹಾಗೂ ಎಲ್ಲಾ ಜಾತ್ಯಾತೀತ ಪಕ್ಷಗಳ ಸರ್ವ ರೀತಿಯ ಸಹಕಾರ ಮತ್ತು ಸಹಭಾಗಿತ್ವದೊಂದಿಗೆ ಸುಳ್ಯ ತಾಲೂಕು ಮುಸ್ಲಿಂ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ತಾಲೂಕಿನ ವಿವಿಧ ಭಾಗಗಳಿಂದ ಜನರು ಭಾಗವಹಿಸಿ, ದೇಶದ ಸಂವಿಧಾನದ ಉಳಿವಿಗಾಗಿ ಹಕ್ಕೊತ್ತಾಯ ಮಂಡಿಸಲಿದ್ದಾರೆ ಎಂದು ಅವರು ಹೇಳಿದರು.
ಪ್ರತಿಭಟನಾ ಸಭೆಯ ದಿನ ಸುಳ್ಯದ ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬೆಂಬಲ ನೀಡಬೇಕೆಂದು ಅವರು ವಿನಂತಿಸಿದ್ದಾರೆ. ಪ್ರತಿಭಟನಾ ಸಭೆಯ ಬಳಿಕ ಸುಳ್ಯ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಅಧ್ಯಕ್ಷ ಇಸಾಕ್ ಸಾಹೇಬ್ ಪಾಜಪಳ್ಳ, ಪ್ರಮುಖರಾದ ಕೆ.ಎಂ.ಮುಸ್ತಫ, ಪಿ.ಎ.ಮಹಮ್ಮದ್, ಮಹಮ್ಮದ್ ಕುಂಞ ಗೂನಡ್ಕ, ಆರ್.ಕೆ.ಮಹಮ್ಮದ್, ಕೆ.ಎಸ್.ಉಮ್ಮರ್, ರಶೀದ್ ಜಟ್ಟಿಪಳ್ಳ, ಮೂಸಾ ಕುಂಞ ಪೈಂಬೆಚ್ಚಾಲು, ಡಿ.ಎಂ.ಶಾರಿಕ್,ಅಬ್ದುಲ್ ಮಜೀದ್, ರಫೀಕ್ ಪಡು, ಅಬೂಬಕ್ಕರ್ ಅಡ್ಕಾರ್ ಉಪಸ್ಥಿತರಿದ್ದರು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…