ಎನ್.ಎ.ಸುಂದರ ಅವರಿಗೆ ಶ್ರದ್ಧಾಂಜಲಿ ಸಭೆ

May 1, 2019
5:32 AM

ಸುಳ್ಯ: ಇತ್ತೀಚೆಗೆ ಅಗಲಿದ ಸುಳ್ಯ ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿದ್ದ ಎನ್.ಎ.ಸುಂದರ ಅವರಿಗೆ ಶ್ರದ್ಧಾಂಜಲಿ ಸಭೆ ಸುಳ್ಯದ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆಯಿತು.

ಸಭೆಯಲ್ಲಿ ಮಾತನಾಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರಿಯ ಕಾರ್ಯಕಾರಿಣಿ ಸಮಿತಿ ಸದಸ್ಯ ಡಾ.ಪ್ರಭಾಕರ ಭಟ್ ಕಲ್ಲಡ್ಕ “ಸಂಘದ ಮತ್ತು ಬಿಜೆಪಿಯ ಚಟುವಟಿಕೆಗಳಿಗೆ ವಿರೋಧಗಳು ಪ್ರಬಲವಾಗಿದ್ದ ಕಾಲದಲ್ಲಿ ಹಿಂದೂ ಸಮಾಜವನ್ನು ಸಂಘಟಿಸುವಲ್ಲಿ ಎನ್.ಎ.ಸುಂದರ ಅವರು ಪ್ರಮುಖ ಪಾತ್ರ ವಹಿಸಿದ್ದರು. ತಮ್ಮ ಜೀವನವನ್ನು ಸಮಾಜಕ್ಕಾಗಿ ಮತ್ತು ಸಂಘಟನೆಗಾಗಿ ಮುಡಿಪಾಗಿಟ್ಟಿದ್ದರು ಎಂದು ಸ್ಮರಿಸಿದರು. ತುರ್ತು ಪರಿಸ್ಥಿತಿಯಂತಹ ಸಮಯದಲ್ಲಿಯೂ ಸಂಘಟನೆಯನ್ನು ಕೆಚ್ಚೆದೆಯಿಂದ ಮುನ್ನಡೆಸಿದ್ದರು” ಎಂದು ಅವರು ಹೇಳಿದರು.


ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಕಾರ್ಯವಾಹ ನ.ಸೀತಾರಾಮ, ಸುಳ್ಯ ತಾಲೂಕು ಸಂಘಚಾಲಕ ಚಂದ್ರಶೇಖರ ತಳೂರು, ಜಿಲ್ಲಾ ಕಾರ್ಯವಾಹ ಸುಭಾಶ್ಚಂದ್ರ ಕಳಂಜ, ಎನ್.ಎ.ಸುಂದರ ಅವರ ಸಹೋದರ ಎನ್.ಎ.ರಾಮಚಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯಶೋಧಾ ರಾಮಚಂದ್ರ ಸ್ವಾಗತಿಸಿದರು. ಸುಳ್ಯ ಶಾಸಕ ಎಸ್.ಅಂಗಾರ, ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಮತ್ತಿತರರು ನುಡಿನಮನ ಸಲ್ಲಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror