ಎನ್.ಎ.ಸುಂದರ ಅವರಿಗೆ ಶ್ರದ್ಧಾಂಜಲಿ ಸಭೆ

May 1, 2019
5:32 AM

ಸುಳ್ಯ: ಇತ್ತೀಚೆಗೆ ಅಗಲಿದ ಸುಳ್ಯ ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿದ್ದ ಎನ್.ಎ.ಸುಂದರ ಅವರಿಗೆ ಶ್ರದ್ಧಾಂಜಲಿ ಸಭೆ ಸುಳ್ಯದ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆಯಿತು.

ಸಭೆಯಲ್ಲಿ ಮಾತನಾಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರಿಯ ಕಾರ್ಯಕಾರಿಣಿ ಸಮಿತಿ ಸದಸ್ಯ ಡಾ.ಪ್ರಭಾಕರ ಭಟ್ ಕಲ್ಲಡ್ಕ “ಸಂಘದ ಮತ್ತು ಬಿಜೆಪಿಯ ಚಟುವಟಿಕೆಗಳಿಗೆ ವಿರೋಧಗಳು ಪ್ರಬಲವಾಗಿದ್ದ ಕಾಲದಲ್ಲಿ ಹಿಂದೂ ಸಮಾಜವನ್ನು ಸಂಘಟಿಸುವಲ್ಲಿ ಎನ್.ಎ.ಸುಂದರ ಅವರು ಪ್ರಮುಖ ಪಾತ್ರ ವಹಿಸಿದ್ದರು. ತಮ್ಮ ಜೀವನವನ್ನು ಸಮಾಜಕ್ಕಾಗಿ ಮತ್ತು ಸಂಘಟನೆಗಾಗಿ ಮುಡಿಪಾಗಿಟ್ಟಿದ್ದರು ಎಂದು ಸ್ಮರಿಸಿದರು. ತುರ್ತು ಪರಿಸ್ಥಿತಿಯಂತಹ ಸಮಯದಲ್ಲಿಯೂ ಸಂಘಟನೆಯನ್ನು ಕೆಚ್ಚೆದೆಯಿಂದ ಮುನ್ನಡೆಸಿದ್ದರು” ಎಂದು ಅವರು ಹೇಳಿದರು.


ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಕಾರ್ಯವಾಹ ನ.ಸೀತಾರಾಮ, ಸುಳ್ಯ ತಾಲೂಕು ಸಂಘಚಾಲಕ ಚಂದ್ರಶೇಖರ ತಳೂರು, ಜಿಲ್ಲಾ ಕಾರ್ಯವಾಹ ಸುಭಾಶ್ಚಂದ್ರ ಕಳಂಜ, ಎನ್.ಎ.ಸುಂದರ ಅವರ ಸಹೋದರ ಎನ್.ಎ.ರಾಮಚಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯಶೋಧಾ ರಾಮಚಂದ್ರ ಸ್ವಾಗತಿಸಿದರು. ಸುಳ್ಯ ಶಾಸಕ ಎಸ್.ಅಂಗಾರ, ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಮತ್ತಿತರರು ನುಡಿನಮನ ಸಲ್ಲಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ
May 8, 2026
7:35 AM
by: ಮಿರರ್‌ ಡೆಸ್ಕ್
ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ
May 8, 2026
7:31 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,
May 7, 2026
1:59 PM
by: ಸಾಯಿಶೇಖರ್ ಕರಿಕಳ
ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ
May 7, 2026
7:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror