ಸುಳ್ಯ: ಇತ್ತೀಚೆಗೆ ಅಗಲಿದ ಸುಳ್ಯ ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿದ್ದ ಎನ್.ಎ.ಸುಂದರ ಅವರಿಗೆ ಶ್ರದ್ಧಾಂಜಲಿ ಸಭೆ ಸುಳ್ಯದ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರಿಯ ಕಾರ್ಯಕಾರಿಣಿ ಸಮಿತಿ ಸದಸ್ಯ ಡಾ.ಪ್ರಭಾಕರ ಭಟ್ ಕಲ್ಲಡ್ಕ “ಸಂಘದ ಮತ್ತು ಬಿಜೆಪಿಯ ಚಟುವಟಿಕೆಗಳಿಗೆ ವಿರೋಧಗಳು ಪ್ರಬಲವಾಗಿದ್ದ ಕಾಲದಲ್ಲಿ ಹಿಂದೂ ಸಮಾಜವನ್ನು ಸಂಘಟಿಸುವಲ್ಲಿ ಎನ್.ಎ.ಸುಂದರ ಅವರು ಪ್ರಮುಖ ಪಾತ್ರ ವಹಿಸಿದ್ದರು. ತಮ್ಮ ಜೀವನವನ್ನು ಸಮಾಜಕ್ಕಾಗಿ ಮತ್ತು ಸಂಘಟನೆಗಾಗಿ ಮುಡಿಪಾಗಿಟ್ಟಿದ್ದರು ಎಂದು ಸ್ಮರಿಸಿದರು. ತುರ್ತು ಪರಿಸ್ಥಿತಿಯಂತಹ ಸಮಯದಲ್ಲಿಯೂ ಸಂಘಟನೆಯನ್ನು ಕೆಚ್ಚೆದೆಯಿಂದ ಮುನ್ನಡೆಸಿದ್ದರು” ಎಂದು ಅವರು ಹೇಳಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಕಾರ್ಯವಾಹ ನ.ಸೀತಾರಾಮ, ಸುಳ್ಯ ತಾಲೂಕು ಸಂಘಚಾಲಕ ಚಂದ್ರಶೇಖರ ತಳೂರು, ಜಿಲ್ಲಾ ಕಾರ್ಯವಾಹ ಸುಭಾಶ್ಚಂದ್ರ ಕಳಂಜ, ಎನ್.ಎ.ಸುಂದರ ಅವರ ಸಹೋದರ ಎನ್.ಎ.ರಾಮಚಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯಶೋಧಾ ರಾಮಚಂದ್ರ ಸ್ವಾಗತಿಸಿದರು. ಸುಳ್ಯ ಶಾಸಕ ಎಸ್.ಅಂಗಾರ, ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಮತ್ತಿತರರು ನುಡಿನಮನ ಸಲ್ಲಿಸಿದರು.
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…