ಸುಳ್ಯ: ಇತ್ತೀಚೆಗೆ ಅಗಲಿದ ಸುಳ್ಯ ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿದ್ದ ಎನ್.ಎ.ಸುಂದರ ಅವರಿಗೆ ಶ್ರದ್ಧಾಂಜಲಿ ಸಭೆ ಸುಳ್ಯದ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರಿಯ ಕಾರ್ಯಕಾರಿಣಿ ಸಮಿತಿ ಸದಸ್ಯ ಡಾ.ಪ್ರಭಾಕರ ಭಟ್ ಕಲ್ಲಡ್ಕ “ಸಂಘದ ಮತ್ತು ಬಿಜೆಪಿಯ ಚಟುವಟಿಕೆಗಳಿಗೆ ವಿರೋಧಗಳು ಪ್ರಬಲವಾಗಿದ್ದ ಕಾಲದಲ್ಲಿ ಹಿಂದೂ ಸಮಾಜವನ್ನು ಸಂಘಟಿಸುವಲ್ಲಿ ಎನ್.ಎ.ಸುಂದರ ಅವರು ಪ್ರಮುಖ ಪಾತ್ರ ವಹಿಸಿದ್ದರು. ತಮ್ಮ ಜೀವನವನ್ನು ಸಮಾಜಕ್ಕಾಗಿ ಮತ್ತು ಸಂಘಟನೆಗಾಗಿ ಮುಡಿಪಾಗಿಟ್ಟಿದ್ದರು ಎಂದು ಸ್ಮರಿಸಿದರು. ತುರ್ತು ಪರಿಸ್ಥಿತಿಯಂತಹ ಸಮಯದಲ್ಲಿಯೂ ಸಂಘಟನೆಯನ್ನು ಕೆಚ್ಚೆದೆಯಿಂದ ಮುನ್ನಡೆಸಿದ್ದರು” ಎಂದು ಅವರು ಹೇಳಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಕಾರ್ಯವಾಹ ನ.ಸೀತಾರಾಮ, ಸುಳ್ಯ ತಾಲೂಕು ಸಂಘಚಾಲಕ ಚಂದ್ರಶೇಖರ ತಳೂರು, ಜಿಲ್ಲಾ ಕಾರ್ಯವಾಹ ಸುಭಾಶ್ಚಂದ್ರ ಕಳಂಜ, ಎನ್.ಎ.ಸುಂದರ ಅವರ ಸಹೋದರ ಎನ್.ಎ.ರಾಮಚಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯಶೋಧಾ ರಾಮಚಂದ್ರ ಸ್ವಾಗತಿಸಿದರು. ಸುಳ್ಯ ಶಾಸಕ ಎಸ್.ಅಂಗಾರ, ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಮತ್ತಿತರರು ನುಡಿನಮನ ಸಲ್ಲಿಸಿದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…