ಸುದ್ದಿಗಳು

ಎಪಿಎಂಸಿಯಲ್ಲಿ ಅಡಿಕೆ ಖರೀದಿ ಆರಂಭ | ಗ್ರಾಮೀಣ ಮಟ್ಟದಲ್ಲೂಅಡಿಕೆ ಖರೀದಿ ನಡೆಸಲು ಬೆಳೆಗಾರರಿಂದ ಬೇಡಿಕೆ |

Share

ಸುಳ್ಯ: ಈಗಾಗಲೇ ಪುತ್ತೂರು ಹಾಗೂ ಸುಳ್ಯ ಎಪಿಎಂಸಿ ಯಲ್ಲಿ ಅಡಿಕೆ ಖರೀದಿ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಮಂಗಳವಾರದಿಂದ ಸುಳ್ಯ ಎಪಿಎಂಸಿಯಲ್ಲಿ  ಅಡಿಕೆ ಖರೀದಿ ಆರಂಭಗೊಂಡಿದೆ.  ಇದೀಗ ಗ್ರಾಮಮಟ್ಟದಲ್ಲಿ ಲಾಕ್ಡೌನ್ ನಿಯಮದೊಂದಿಗೆ  ಅಡಿಕೆ ಖರೀದಿಗೆ ವ್ಯವಸ್ಥೆ ಆಗಬೇಕು ಎಂದು ಈಗ ಬೆಳೆಗಾರರಿಂದ ಒತ್ತಾಯ ಕೇಳಿಬಂದಿದೆ.

 

ಈಗಾಗಲೇ ರಾಜ್ಯದಲ್ಲಿ  ಮೇ.3 ರವರೆಗೆ ಲಾಕ್ಡೌನ್ ಮುಂದುವರಿಸಲಾಗಿದೆ. ಅಡಿಕೆ ಬೆಳೆಗಾರರಿಗೆ ಯಾವುದೇ ಕೃಷಿ ಉತ್ಪನ್ನ ಮಾಡಲಾಗುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಬಹುಪಾಲು ಕೃಷಿಕರು ಅಡಿಕೆ ಕೃಷಿಯನ್ನೇ ನಂಬಿದ್ದರೆ, ಸುಳ್ಯ, ಬೆಳ್ತಂಗಡಿ ಪ್ರದೇಶದಲ್ಲಿ ರಬ್ಬರ್ ಕೂಡಾ ಪ್ರಮುಖ ಬೆಳೆ. ಇದೀಗ ಕ್ಯಾಂಪ್ಕೋ ಅಡಿಕೆ ಖರೀದಿ ಮಾಡುತ್ತಿದೆ.  ಆದರೆ ಸೀಮಿತ ಶಾಖೆಗಳಲ್ಲಿ  ಮಾತ್ರವೇ ಅಡಿಕೆ ಖರೀದಿ ನಡೆಸುವುದರಿಂದ ಎಲ್ಲಾ ಬೆಳೆಗಾರರಿಗೆ ಅಡಿಕೆ ಮಾರಾಟ ಮಾಡಲು ಆಗುತ್ತಿಲ್ಲ.  ಇದೀಗ ಎಪ್ರಿಲ್ ಅಂತ್ಯವಾಗುತ್ತಾ ಬಂದಿದೆ. ಅನೇಕ ಕೃಷಿ ಕೆಲಸಗಳು ಬಾಕಿ ಉಳಿದಿದೆ, ಅಡಿಕೆ ಮಾರಾಟ ಮಾಡದೆ ಹಣ ಇಲ್ಲದ ಸ್ಥಿತಿ ಬಹುಪಾಲು ಬೆಳೆಗಾರರಿಗೆ ಇದೆ. ಈ ಕಾರಣದಿಂದ ಮಳೆಗಾಲದ ಮುನ್ನ ಕೃಷಿ ಕಾರ್ಯ ಮುಗಿಯದು. ಹೀಗಾಗಿ ಈಗ ಅಡಿಕೆ ಮಾರಾಟಕ್ಕೆ ವ್ಯವಸ್ಥೆ ಬೇಕಾಗಿದೆ ಎಂದು ಅಡಿಕೆ ಬೆಳೆಗಾರರು ತಿಳಿಸಿದ್ದಾರೆ.

ಈಗ ಲಾಕ್ಡೌನ್ ಇರುವುರಿಂದ ಗ್ರಾಮದ ಹೊರಗೆ ಜನರು ಹೋಗದಂತೆ ತಡೆಯಬೇಕು ಎಂದು ಸರಕಾರವೇ ಹೇಳುತ್ತದೆ. ಇಂತಹ ಸಂದರ್ಭದಲ್ಲಿ  ಅಡಿಕೆಯನ್ನು  ದೂರ ಊರಿಗೆ ಕೊಂಡೊಯ್ಯುವುದು ಹೇಗೆ ? ಎಂಬ ಪ್ರಶ್ನೆ ಇದೆ. ಇದಕ್ಕಾಗಿ ಗ್ರಾಮಮಟ್ಟದಲ್ಲೂ ಸಾಮಾಜಿಕ ಅಂತರ ಹಾಗೂ ನಿಯಮಗಳೊಂದಿಗೆ ಎಪಿಎಂಸಿ ತೆರಿಗೆ, ಜಿಎಸ್ಟಿ ಸಹಿತವಾಗಿ ಇರುವ ವ್ಯಾಪಾರಿಗಳೂ ಅಡಿಕೆ ಖರೀದಿ ನಡೆಸಿದರೆ ಕೃಷಿಕರಿಗೆ ಉಪಕಾರಿಯಾಗಲಿದೆ ಅಲ್ಲದೆ ಕ್ಯಾಂಪ್ಕೋ ಸಂಸ್ಥೆಗೂ ಹೊರೆ ತಪ್ಪಲಿದೆ ಎಂಬುದು ಅಡಿಕೆ ಬೆಳೆಗಾರರ ಅಭಿಮತ. ಅದಿಕಾರಿಗಳು, ಸರಕಾರ ಈ ಬಗ್ಗೆ ಚಿಂತನೆ ನಡೆಸಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಸೋಂಕಿಗೆ ವೃದ್ಧೆ ಬಲಿ | ಮಂಗನಕಾಯಿಲೆ ಬಗ್ಗೆ ಇರಲಿ ಎಚ್ಚರ |

ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ…

9 minutes ago

ಅಮೆರಿಕದ ಹಲವು ರಾಜ್ಯಗಳಲ್ಲಿ ಚಂಡಮಾರುತ-ಸುಳಿಗಾಳಿ; ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿ

ಅಮೆರಿಕದ  ಹಲವು ರಾಜ್ಯಗಳಲ್ಲಿ  ಅತ್ಯಂತ ಪ್ರಬಲ ಚಂಡಮಾರುತ ಹಾಗೂ  ಸುಳಿಗಾಳಿ ಉಂಟಾಗಿದ್ದು,  ಈವರೆಗೆ…

43 minutes ago

ಉತ್ತರ ಒಳನಾಡಿನಲ್ಲಿ ಬಿಸಿಹವೆ – ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಾ. 20 ರವರೆಗೆ ಬಿಸಿ ಗಾಳಿ ಬೀಸುವ…

60 minutes ago

ಕಾಶ್ಮೀರದಲ್ಲಿ ಹಿಮಪಾತ ಆರಂಭ | ಮಧ್ಯಭಾರತ ಹಾಗೂ  ಉತ್ತರ ಭಾರತದಲ್ಲಿ  ತಾಪಮಾನ ಗಣನೀಯ ಪ್ರಮಾಣದಲ್ಲಿ  ಏರಿಕೆ

ಕಣಿವೆ ರಾಜ್ಯ  ಕಾಶ್ಮೀರದಲ್ಲಿ  ಹಿಮಪಾತ  ಆರಂಭವಾಗಿದೆ.   ಕಾಶ್ಮೀರದ  ಹಲವು ಭಾಗಗಳಲ್ಲಿ ಎರಡು ದಿನಗಳ…

1 hour ago

ಹವಾಮಾನ ವರದಿ | 18-03-2025 | ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ | ಮಾ.25 ರ ನಂತರ ವಿವಿದೆಡೆ ಮಳೆ ಸಾಧ್ಯತೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ, ಕೊಡಗು ಜಿಲ್ಲೆಯ…

7 hours ago