ಸುಳ್ಯ: ಈಗಾಗಲೇ ಪುತ್ತೂರು ಹಾಗೂ ಸುಳ್ಯ ಎಪಿಎಂಸಿ ಯಲ್ಲಿ ಅಡಿಕೆ ಖರೀದಿ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಮಂಗಳವಾರದಿಂದ ಸುಳ್ಯ ಎಪಿಎಂಸಿಯಲ್ಲಿ ಅಡಿಕೆ ಖರೀದಿ ಆರಂಭಗೊಂಡಿದೆ. ಇದೀಗ ಗ್ರಾಮಮಟ್ಟದಲ್ಲಿ ಲಾಕ್ಡೌನ್ ನಿಯಮದೊಂದಿಗೆ ಅಡಿಕೆ ಖರೀದಿಗೆ ವ್ಯವಸ್ಥೆ ಆಗಬೇಕು ಎಂದು ಈಗ ಬೆಳೆಗಾರರಿಂದ ಒತ್ತಾಯ ಕೇಳಿಬಂದಿದೆ.
ಈಗಾಗಲೇ ರಾಜ್ಯದಲ್ಲಿ ಮೇ.3 ರವರೆಗೆ ಲಾಕ್ಡೌನ್ ಮುಂದುವರಿಸಲಾಗಿದೆ. ಅಡಿಕೆ ಬೆಳೆಗಾರರಿಗೆ ಯಾವುದೇ ಕೃಷಿ ಉತ್ಪನ್ನ ಮಾಡಲಾಗುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುಪಾಲು ಕೃಷಿಕರು ಅಡಿಕೆ ಕೃಷಿಯನ್ನೇ ನಂಬಿದ್ದರೆ, ಸುಳ್ಯ, ಬೆಳ್ತಂಗಡಿ ಪ್ರದೇಶದಲ್ಲಿ ರಬ್ಬರ್ ಕೂಡಾ ಪ್ರಮುಖ ಬೆಳೆ. ಇದೀಗ ಕ್ಯಾಂಪ್ಕೋ ಅಡಿಕೆ ಖರೀದಿ ಮಾಡುತ್ತಿದೆ. ಆದರೆ ಸೀಮಿತ ಶಾಖೆಗಳಲ್ಲಿ ಮಾತ್ರವೇ ಅಡಿಕೆ ಖರೀದಿ ನಡೆಸುವುದರಿಂದ ಎಲ್ಲಾ ಬೆಳೆಗಾರರಿಗೆ ಅಡಿಕೆ ಮಾರಾಟ ಮಾಡಲು ಆಗುತ್ತಿಲ್ಲ. ಇದೀಗ ಎಪ್ರಿಲ್ ಅಂತ್ಯವಾಗುತ್ತಾ ಬಂದಿದೆ. ಅನೇಕ ಕೃಷಿ ಕೆಲಸಗಳು ಬಾಕಿ ಉಳಿದಿದೆ, ಅಡಿಕೆ ಮಾರಾಟ ಮಾಡದೆ ಹಣ ಇಲ್ಲದ ಸ್ಥಿತಿ ಬಹುಪಾಲು ಬೆಳೆಗಾರರಿಗೆ ಇದೆ. ಈ ಕಾರಣದಿಂದ ಮಳೆಗಾಲದ ಮುನ್ನ ಕೃಷಿ ಕಾರ್ಯ ಮುಗಿಯದು. ಹೀಗಾಗಿ ಈಗ ಅಡಿಕೆ ಮಾರಾಟಕ್ಕೆ ವ್ಯವಸ್ಥೆ ಬೇಕಾಗಿದೆ ಎಂದು ಅಡಿಕೆ ಬೆಳೆಗಾರರು ತಿಳಿಸಿದ್ದಾರೆ.
ಈಗ ಲಾಕ್ಡೌನ್ ಇರುವುರಿಂದ ಗ್ರಾಮದ ಹೊರಗೆ ಜನರು ಹೋಗದಂತೆ ತಡೆಯಬೇಕು ಎಂದು ಸರಕಾರವೇ ಹೇಳುತ್ತದೆ. ಇಂತಹ ಸಂದರ್ಭದಲ್ಲಿ ಅಡಿಕೆಯನ್ನು ದೂರ ಊರಿಗೆ ಕೊಂಡೊಯ್ಯುವುದು ಹೇಗೆ ? ಎಂಬ ಪ್ರಶ್ನೆ ಇದೆ. ಇದಕ್ಕಾಗಿ ಗ್ರಾಮಮಟ್ಟದಲ್ಲೂ ಸಾಮಾಜಿಕ ಅಂತರ ಹಾಗೂ ನಿಯಮಗಳೊಂದಿಗೆ ಎಪಿಎಂಸಿ ತೆರಿಗೆ, ಜಿಎಸ್ಟಿ ಸಹಿತವಾಗಿ ಇರುವ ವ್ಯಾಪಾರಿಗಳೂ ಅಡಿಕೆ ಖರೀದಿ ನಡೆಸಿದರೆ ಕೃಷಿಕರಿಗೆ ಉಪಕಾರಿಯಾಗಲಿದೆ ಅಲ್ಲದೆ ಕ್ಯಾಂಪ್ಕೋ ಸಂಸ್ಥೆಗೂ ಹೊರೆ ತಪ್ಪಲಿದೆ ಎಂಬುದು ಅಡಿಕೆ ಬೆಳೆಗಾರರ ಅಭಿಮತ. ಅದಿಕಾರಿಗಳು, ಸರಕಾರ ಈ ಬಗ್ಗೆ ಚಿಂತನೆ ನಡೆಸಬೇಕಿದೆ ಎಂದು ಒತ್ತಾಯಿಸಿದ್ದಾರೆ.
ಸಾಧನೆ ಮನುಷ್ಯನಿಗೆ ಎತ್ತರ ಕೊಡಬಹುದು, ಆದರೆ ಸಂಯಮ ಮತ್ತು ವಿನಯ ಮಾತ್ರ ಗೌರವವನ್ನು…
ತೆಂಗಿನ ತೋಟಗಳಲ್ಲಿ ರೋಗ ಮತ್ತು ಕಡಿಮೆ ಇಳುವರಿ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ…
ಭಾರತದ ತೆಂಗಿನ ನಗರಿ ಎಂದು ಕರೆಯುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಎಳನೀರು ಉತ್ಪಾದನೆ 40%…
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…