Advertisement
ಸುದ್ದಿಗಳು

ಎಪಿಎಂಸಿಯಲ್ಲಿ ಅಡಿಕೆ ಖರೀದಿ ಆರಂಭ | ಗ್ರಾಮೀಣ ಮಟ್ಟದಲ್ಲೂಅಡಿಕೆ ಖರೀದಿ ನಡೆಸಲು ಬೆಳೆಗಾರರಿಂದ ಬೇಡಿಕೆ |

Share

ಸುಳ್ಯ: ಈಗಾಗಲೇ ಪುತ್ತೂರು ಹಾಗೂ ಸುಳ್ಯ ಎಪಿಎಂಸಿ ಯಲ್ಲಿ ಅಡಿಕೆ ಖರೀದಿ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಮಂಗಳವಾರದಿಂದ ಸುಳ್ಯ ಎಪಿಎಂಸಿಯಲ್ಲಿ  ಅಡಿಕೆ ಖರೀದಿ ಆರಂಭಗೊಂಡಿದೆ.  ಇದೀಗ ಗ್ರಾಮಮಟ್ಟದಲ್ಲಿ ಲಾಕ್ಡೌನ್ ನಿಯಮದೊಂದಿಗೆ  ಅಡಿಕೆ ಖರೀದಿಗೆ ವ್ಯವಸ್ಥೆ ಆಗಬೇಕು ಎಂದು ಈಗ ಬೆಳೆಗಾರರಿಂದ ಒತ್ತಾಯ ಕೇಳಿಬಂದಿದೆ.

Advertisement

 

ಈಗಾಗಲೇ ರಾಜ್ಯದಲ್ಲಿ  ಮೇ.3 ರವರೆಗೆ ಲಾಕ್ಡೌನ್ ಮುಂದುವರಿಸಲಾಗಿದೆ. ಅಡಿಕೆ ಬೆಳೆಗಾರರಿಗೆ ಯಾವುದೇ ಕೃಷಿ ಉತ್ಪನ್ನ ಮಾಡಲಾಗುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಬಹುಪಾಲು ಕೃಷಿಕರು ಅಡಿಕೆ ಕೃಷಿಯನ್ನೇ ನಂಬಿದ್ದರೆ, ಸುಳ್ಯ, ಬೆಳ್ತಂಗಡಿ ಪ್ರದೇಶದಲ್ಲಿ ರಬ್ಬರ್ ಕೂಡಾ ಪ್ರಮುಖ ಬೆಳೆ. ಇದೀಗ ಕ್ಯಾಂಪ್ಕೋ ಅಡಿಕೆ ಖರೀದಿ ಮಾಡುತ್ತಿದೆ.  ಆದರೆ ಸೀಮಿತ ಶಾಖೆಗಳಲ್ಲಿ  ಮಾತ್ರವೇ ಅಡಿಕೆ ಖರೀದಿ ನಡೆಸುವುದರಿಂದ ಎಲ್ಲಾ ಬೆಳೆಗಾರರಿಗೆ ಅಡಿಕೆ ಮಾರಾಟ ಮಾಡಲು ಆಗುತ್ತಿಲ್ಲ.  ಇದೀಗ ಎಪ್ರಿಲ್ ಅಂತ್ಯವಾಗುತ್ತಾ ಬಂದಿದೆ. ಅನೇಕ ಕೃಷಿ ಕೆಲಸಗಳು ಬಾಕಿ ಉಳಿದಿದೆ, ಅಡಿಕೆ ಮಾರಾಟ ಮಾಡದೆ ಹಣ ಇಲ್ಲದ ಸ್ಥಿತಿ ಬಹುಪಾಲು ಬೆಳೆಗಾರರಿಗೆ ಇದೆ. ಈ ಕಾರಣದಿಂದ ಮಳೆಗಾಲದ ಮುನ್ನ ಕೃಷಿ ಕಾರ್ಯ ಮುಗಿಯದು. ಹೀಗಾಗಿ ಈಗ ಅಡಿಕೆ ಮಾರಾಟಕ್ಕೆ ವ್ಯವಸ್ಥೆ ಬೇಕಾಗಿದೆ ಎಂದು ಅಡಿಕೆ ಬೆಳೆಗಾರರು ತಿಳಿಸಿದ್ದಾರೆ.

ಈಗ ಲಾಕ್ಡೌನ್ ಇರುವುರಿಂದ ಗ್ರಾಮದ ಹೊರಗೆ ಜನರು ಹೋಗದಂತೆ ತಡೆಯಬೇಕು ಎಂದು ಸರಕಾರವೇ ಹೇಳುತ್ತದೆ. ಇಂತಹ ಸಂದರ್ಭದಲ್ಲಿ  ಅಡಿಕೆಯನ್ನು  ದೂರ ಊರಿಗೆ ಕೊಂಡೊಯ್ಯುವುದು ಹೇಗೆ ? ಎಂಬ ಪ್ರಶ್ನೆ ಇದೆ. ಇದಕ್ಕಾಗಿ ಗ್ರಾಮಮಟ್ಟದಲ್ಲೂ ಸಾಮಾಜಿಕ ಅಂತರ ಹಾಗೂ ನಿಯಮಗಳೊಂದಿಗೆ ಎಪಿಎಂಸಿ ತೆರಿಗೆ, ಜಿಎಸ್ಟಿ ಸಹಿತವಾಗಿ ಇರುವ ವ್ಯಾಪಾರಿಗಳೂ ಅಡಿಕೆ ಖರೀದಿ ನಡೆಸಿದರೆ ಕೃಷಿಕರಿಗೆ ಉಪಕಾರಿಯಾಗಲಿದೆ ಅಲ್ಲದೆ ಕ್ಯಾಂಪ್ಕೋ ಸಂಸ್ಥೆಗೂ ಹೊರೆ ತಪ್ಪಲಿದೆ ಎಂಬುದು ಅಡಿಕೆ ಬೆಳೆಗಾರರ ಅಭಿಮತ. ಅದಿಕಾರಿಗಳು, ಸರಕಾರ ಈ ಬಗ್ಗೆ ಚಿಂತನೆ ನಡೆಸಬೇಕಿದೆ ಎಂದು ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

3 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

3 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

12 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago