ಸುಳ್ಯ: ಈಗಾಗಲೇ ಪುತ್ತೂರು ಹಾಗೂ ಸುಳ್ಯ ಎಪಿಎಂಸಿ ಯಲ್ಲಿ ಅಡಿಕೆ ಖರೀದಿ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಮಂಗಳವಾರದಿಂದ ಸುಳ್ಯ ಎಪಿಎಂಸಿಯಲ್ಲಿ ಅಡಿಕೆ ಖರೀದಿ ಆರಂಭಗೊಂಡಿದೆ. ಇದೀಗ ಗ್ರಾಮಮಟ್ಟದಲ್ಲಿ ಲಾಕ್ಡೌನ್ ನಿಯಮದೊಂದಿಗೆ ಅಡಿಕೆ ಖರೀದಿಗೆ ವ್ಯವಸ್ಥೆ ಆಗಬೇಕು ಎಂದು ಈಗ ಬೆಳೆಗಾರರಿಂದ ಒತ್ತಾಯ ಕೇಳಿಬಂದಿದೆ.
ಈಗಾಗಲೇ ರಾಜ್ಯದಲ್ಲಿ ಮೇ.3 ರವರೆಗೆ ಲಾಕ್ಡೌನ್ ಮುಂದುವರಿಸಲಾಗಿದೆ. ಅಡಿಕೆ ಬೆಳೆಗಾರರಿಗೆ ಯಾವುದೇ ಕೃಷಿ ಉತ್ಪನ್ನ ಮಾಡಲಾಗುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುಪಾಲು ಕೃಷಿಕರು ಅಡಿಕೆ ಕೃಷಿಯನ್ನೇ ನಂಬಿದ್ದರೆ, ಸುಳ್ಯ, ಬೆಳ್ತಂಗಡಿ ಪ್ರದೇಶದಲ್ಲಿ ರಬ್ಬರ್ ಕೂಡಾ ಪ್ರಮುಖ ಬೆಳೆ. ಇದೀಗ ಕ್ಯಾಂಪ್ಕೋ ಅಡಿಕೆ ಖರೀದಿ ಮಾಡುತ್ತಿದೆ. ಆದರೆ ಸೀಮಿತ ಶಾಖೆಗಳಲ್ಲಿ ಮಾತ್ರವೇ ಅಡಿಕೆ ಖರೀದಿ ನಡೆಸುವುದರಿಂದ ಎಲ್ಲಾ ಬೆಳೆಗಾರರಿಗೆ ಅಡಿಕೆ ಮಾರಾಟ ಮಾಡಲು ಆಗುತ್ತಿಲ್ಲ. ಇದೀಗ ಎಪ್ರಿಲ್ ಅಂತ್ಯವಾಗುತ್ತಾ ಬಂದಿದೆ. ಅನೇಕ ಕೃಷಿ ಕೆಲಸಗಳು ಬಾಕಿ ಉಳಿದಿದೆ, ಅಡಿಕೆ ಮಾರಾಟ ಮಾಡದೆ ಹಣ ಇಲ್ಲದ ಸ್ಥಿತಿ ಬಹುಪಾಲು ಬೆಳೆಗಾರರಿಗೆ ಇದೆ. ಈ ಕಾರಣದಿಂದ ಮಳೆಗಾಲದ ಮುನ್ನ ಕೃಷಿ ಕಾರ್ಯ ಮುಗಿಯದು. ಹೀಗಾಗಿ ಈಗ ಅಡಿಕೆ ಮಾರಾಟಕ್ಕೆ ವ್ಯವಸ್ಥೆ ಬೇಕಾಗಿದೆ ಎಂದು ಅಡಿಕೆ ಬೆಳೆಗಾರರು ತಿಳಿಸಿದ್ದಾರೆ.
ಈಗ ಲಾಕ್ಡೌನ್ ಇರುವುರಿಂದ ಗ್ರಾಮದ ಹೊರಗೆ ಜನರು ಹೋಗದಂತೆ ತಡೆಯಬೇಕು ಎಂದು ಸರಕಾರವೇ ಹೇಳುತ್ತದೆ. ಇಂತಹ ಸಂದರ್ಭದಲ್ಲಿ ಅಡಿಕೆಯನ್ನು ದೂರ ಊರಿಗೆ ಕೊಂಡೊಯ್ಯುವುದು ಹೇಗೆ ? ಎಂಬ ಪ್ರಶ್ನೆ ಇದೆ. ಇದಕ್ಕಾಗಿ ಗ್ರಾಮಮಟ್ಟದಲ್ಲೂ ಸಾಮಾಜಿಕ ಅಂತರ ಹಾಗೂ ನಿಯಮಗಳೊಂದಿಗೆ ಎಪಿಎಂಸಿ ತೆರಿಗೆ, ಜಿಎಸ್ಟಿ ಸಹಿತವಾಗಿ ಇರುವ ವ್ಯಾಪಾರಿಗಳೂ ಅಡಿಕೆ ಖರೀದಿ ನಡೆಸಿದರೆ ಕೃಷಿಕರಿಗೆ ಉಪಕಾರಿಯಾಗಲಿದೆ ಅಲ್ಲದೆ ಕ್ಯಾಂಪ್ಕೋ ಸಂಸ್ಥೆಗೂ ಹೊರೆ ತಪ್ಪಲಿದೆ ಎಂಬುದು ಅಡಿಕೆ ಬೆಳೆಗಾರರ ಅಭಿಮತ. ಅದಿಕಾರಿಗಳು, ಸರಕಾರ ಈ ಬಗ್ಗೆ ಚಿಂತನೆ ನಡೆಸಬೇಕಿದೆ ಎಂದು ಒತ್ತಾಯಿಸಿದ್ದಾರೆ.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…