Advertisement
ಸುದ್ದಿಗಳು

ಎರಡನೇ ಹಂತದಲ್ಲಿ 20 ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ

Share

ಮುಕ್ಕೂರು : ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ ದಾನಿಗಳ‌ ನೆರವಿನೊಂದಿಗೆ ಎರಡನೆ ಹಂತದಲ್ಲಿ 20 ಕುಟುಂಬಗಳಿಗೆ 12 ಅಗತ್ಯ ಆಹಾರ ಸಾಮಗ್ರಿಗಳ ಕಿಟ್  ವಿತರಿಸಲಾಯಿತು.

ಮುಕ್ಕೂರು, ಕುಂಡಡ್ಕ, ಕಾನಾವು, ಚೆನ್ನಾವರ, ಅನವುಗುಂಡಿ ಆಸುಪಾಸಿನ ಪ್ರದೇಶದಲ್ಲಿ ಈ ತನಕ ಆಹಾರ ಕಿಟ್ ಸಿಗದೆ ಇರುವ 19 ಕುಟುಂಬಗಳಿಗೆ ಹಾಗೂ ಇತರ 1 ಕುಟುಂಬಕ್ಕೆ ಅಗತ್ಯ ವಸ್ತುಗಳಿರುವ ಕಿಟ್ ವಿತರಿಸಲಾಯಿತು.

ಮನೆ ಮನೆಗೆ ಕಿಟ್ ವಿತರಣೆಗೆ ಚಾಲನೆ ನೀಡಿದ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಮಾತನಾಡಿ, ಜಾತಿ,‌ ಮತ, ಪಕ್ಷದ ಬೇಧಭಾವ ಇಲ್ಲದೆ ಸೇವಾ ಮನೋಭಾವದ ಪರಿಕಲ್ಪನೆಯೊಂದಿಗೆ ಹುಟ್ಟಿಕೊಂಡ ನೇಸರ ಯುವಕ ಮಂಡಲ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಸಮಾಜಮುಖಿ ಚಿಂತನೆ ಪೂರಕವಾಗಿ ಈಗಾಗಲೇ ಹತ್ತಾರು ಚಟುವಟಿಕೆಗಳನ್ನು ಹಮ್ಮಿಕೊಂಡಿದೆ.ಸಮಾಜಪರ ಕಾರ್ಯಗಳಿಗೆ ಸದಾ ಬೆಂಬಲ ‌ನೀಡುವ ಈ ಊರಿನ ದಾನಿಗಳ‌ ಸಹಯೋಗದೊಂದಿಗೆ ಕೊರೊನಾ ಕಷ್ಟಕಾಲದಲ್ಲಿ ಮೊದಲ ಹಂತದಲ್ಲಿ 10 ಮತ್ತು ಎರಡನೇ ಹಂತದಲ್ಲಿ 20 ಕುಟುಂಬಗಳಿಗೆ ಸೇರಿದಂತೆ ಒಟ್ಟು 30 ಮನೆಗಳಿಗೆ ಕಿಟ್ ವಿತರಿಸಿದ್ದೇವೆ ಎಂದರು.

ಈ ಸಂದರ್ಭದಲ್ಲಿ ದಾನಿಗಳಾದ ಯತೀಶ್ ಕಾನಾವು ಜಾಲು, ಗೋಪಾಲಕೃಷ್ಣ ಭಟ್ ಕಾನಾವು, ರಾಧಾಕೃಷ್ಣ ರೈ ಕನ್ನೆಜಾಲು, ಮಹೇಶ್ ಕುಂಡಡ್ಕ, ರಾಮಚಂದ್ರ ಕೋಡಿಬೈಲು, ಜಯಪ್ರಕಾಶ್ ರೈ ಕನ್ನೆಜಾಲು, ಕುಂಬ್ರ ದಯಾಕರ ಆಳ್ವ, ನಿವೃತ್ತ ಶಿಕ್ಷಕ ಬಾಬು ಎನ್, ಗೋಪಾಲಕೃಷ್ಣ ಭಟ್ ಮನವಳಿಕೆ, ರಾಮಚಂದ್ರ ಬರೆಪ್ಪಾಡಿ, ಕುಸುಮಾಧರ ಪೂಜಾರಿ ಅಡ್ಯತಕಂಡ, ಪ್ರಸಾದ್ ಎನ್ ಕುಂಡಡ್ಕ, ರಮೇಶ್ ಪೂಜಾರಿ ಮುಕ್ಕೂರು, ನೇಸರ ಯುವಕ ಮಂಡಲ ಅಧ್ಯಕ್ಷ ರಮೇಶ್ ಕಾನಾವು, ಕಾರ್ಯದರ್ಶಿ ಶಶಿಕುಮಾರ್ ಬಿ.ಎನ್., ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ಕಾರ್ಯದರ್ಶಿ ರಕ್ಷಿತ್ ಗೌಡ ಒರುಂಕು ಮೊದಲಾದವರು ಸಹಕರಿಸಿದರು.

20 ಕುಟುಂಬಕ್ಕೆ ಆಹಾರ್ ಸಾಮಾಗ್ರಿ ವಿತರಣೆ: 

ಪ್ರತಿ ಕುಟುಂಬಕ್ಕೆ ಹಾಲು, ಸಕ್ಕರೆ, ಚಾ ಹುಡಿ, ಅವಲಕ್ಕಿ, ಕೆಂಪು ಕಡಲೆ, ಕುಮ್ಟೆ ಮೆಣಸು, ಈರುಳ್ಳಿ, ಟೊಮ್ಯಾಟೊ, ಬಟಾಟೆ, ಉಪ್ಪು, ಸಾಬೂನು ಸೇರಿದಂತೆ 12 ವಸ್ತುಗಳು ಇರುವ ಕಿಟ್ ಅನ್ನು‌ ಒಟ್ಟು 20 ಕುಟುಂಬಗಳಿಗೆ ವಿತರಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

4 days ago