Advertisement
ಸುದ್ದಿಗಳು

ಎರಡನೇ ಹಂತದಲ್ಲಿ 20 ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ

Share

ಮುಕ್ಕೂರು : ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ ದಾನಿಗಳ‌ ನೆರವಿನೊಂದಿಗೆ ಎರಡನೆ ಹಂತದಲ್ಲಿ 20 ಕುಟುಂಬಗಳಿಗೆ 12 ಅಗತ್ಯ ಆಹಾರ ಸಾಮಗ್ರಿಗಳ ಕಿಟ್  ವಿತರಿಸಲಾಯಿತು.

ಮುಕ್ಕೂರು, ಕುಂಡಡ್ಕ, ಕಾನಾವು, ಚೆನ್ನಾವರ, ಅನವುಗುಂಡಿ ಆಸುಪಾಸಿನ ಪ್ರದೇಶದಲ್ಲಿ ಈ ತನಕ ಆಹಾರ ಕಿಟ್ ಸಿಗದೆ ಇರುವ 19 ಕುಟುಂಬಗಳಿಗೆ ಹಾಗೂ ಇತರ 1 ಕುಟುಂಬಕ್ಕೆ ಅಗತ್ಯ ವಸ್ತುಗಳಿರುವ ಕಿಟ್ ವಿತರಿಸಲಾಯಿತು.

Advertisement

ಮನೆ ಮನೆಗೆ ಕಿಟ್ ವಿತರಣೆಗೆ ಚಾಲನೆ ನೀಡಿದ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಮಾತನಾಡಿ, ಜಾತಿ,‌ ಮತ, ಪಕ್ಷದ ಬೇಧಭಾವ ಇಲ್ಲದೆ ಸೇವಾ ಮನೋಭಾವದ ಪರಿಕಲ್ಪನೆಯೊಂದಿಗೆ ಹುಟ್ಟಿಕೊಂಡ ನೇಸರ ಯುವಕ ಮಂಡಲ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಸಮಾಜಮುಖಿ ಚಿಂತನೆ ಪೂರಕವಾಗಿ ಈಗಾಗಲೇ ಹತ್ತಾರು ಚಟುವಟಿಕೆಗಳನ್ನು ಹಮ್ಮಿಕೊಂಡಿದೆ.ಸಮಾಜಪರ ಕಾರ್ಯಗಳಿಗೆ ಸದಾ ಬೆಂಬಲ ‌ನೀಡುವ ಈ ಊರಿನ ದಾನಿಗಳ‌ ಸಹಯೋಗದೊಂದಿಗೆ ಕೊರೊನಾ ಕಷ್ಟಕಾಲದಲ್ಲಿ ಮೊದಲ ಹಂತದಲ್ಲಿ 10 ಮತ್ತು ಎರಡನೇ ಹಂತದಲ್ಲಿ 20 ಕುಟುಂಬಗಳಿಗೆ ಸೇರಿದಂತೆ ಒಟ್ಟು 30 ಮನೆಗಳಿಗೆ ಕಿಟ್ ವಿತರಿಸಿದ್ದೇವೆ ಎಂದರು.

ಈ ಸಂದರ್ಭದಲ್ಲಿ ದಾನಿಗಳಾದ ಯತೀಶ್ ಕಾನಾವು ಜಾಲು, ಗೋಪಾಲಕೃಷ್ಣ ಭಟ್ ಕಾನಾವು, ರಾಧಾಕೃಷ್ಣ ರೈ ಕನ್ನೆಜಾಲು, ಮಹೇಶ್ ಕುಂಡಡ್ಕ, ರಾಮಚಂದ್ರ ಕೋಡಿಬೈಲು, ಜಯಪ್ರಕಾಶ್ ರೈ ಕನ್ನೆಜಾಲು, ಕುಂಬ್ರ ದಯಾಕರ ಆಳ್ವ, ನಿವೃತ್ತ ಶಿಕ್ಷಕ ಬಾಬು ಎನ್, ಗೋಪಾಲಕೃಷ್ಣ ಭಟ್ ಮನವಳಿಕೆ, ರಾಮಚಂದ್ರ ಬರೆಪ್ಪಾಡಿ, ಕುಸುಮಾಧರ ಪೂಜಾರಿ ಅಡ್ಯತಕಂಡ, ಪ್ರಸಾದ್ ಎನ್ ಕುಂಡಡ್ಕ, ರಮೇಶ್ ಪೂಜಾರಿ ಮುಕ್ಕೂರು, ನೇಸರ ಯುವಕ ಮಂಡಲ ಅಧ್ಯಕ್ಷ ರಮೇಶ್ ಕಾನಾವು, ಕಾರ್ಯದರ್ಶಿ ಶಶಿಕುಮಾರ್ ಬಿ.ಎನ್., ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ಕಾರ್ಯದರ್ಶಿ ರಕ್ಷಿತ್ ಗೌಡ ಒರುಂಕು ಮೊದಲಾದವರು ಸಹಕರಿಸಿದರು.

Advertisement

20 ಕುಟುಂಬಕ್ಕೆ ಆಹಾರ್ ಸಾಮಾಗ್ರಿ ವಿತರಣೆ: 

ಪ್ರತಿ ಕುಟುಂಬಕ್ಕೆ ಹಾಲು, ಸಕ್ಕರೆ, ಚಾ ಹುಡಿ, ಅವಲಕ್ಕಿ, ಕೆಂಪು ಕಡಲೆ, ಕುಮ್ಟೆ ಮೆಣಸು, ಈರುಳ್ಳಿ, ಟೊಮ್ಯಾಟೊ, ಬಟಾಟೆ, ಉಪ್ಪು, ಸಾಬೂನು ಸೇರಿದಂತೆ 12 ವಸ್ತುಗಳು ಇರುವ ಕಿಟ್ ಅನ್ನು‌ ಒಟ್ಟು 20 ಕುಟುಂಬಗಳಿಗೆ ವಿತರಿಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

1 day ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 day ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 days ago