Advertisement
ಸುದ್ದಿಗಳು

ಎರಡನೇ ಹಂತದಲ್ಲಿ 20 ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ

Share

ಮುಕ್ಕೂರು : ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ ದಾನಿಗಳ‌ ನೆರವಿನೊಂದಿಗೆ ಎರಡನೆ ಹಂತದಲ್ಲಿ 20 ಕುಟುಂಬಗಳಿಗೆ 12 ಅಗತ್ಯ ಆಹಾರ ಸಾಮಗ್ರಿಗಳ ಕಿಟ್  ವಿತರಿಸಲಾಯಿತು.

ಮುಕ್ಕೂರು, ಕುಂಡಡ್ಕ, ಕಾನಾವು, ಚೆನ್ನಾವರ, ಅನವುಗುಂಡಿ ಆಸುಪಾಸಿನ ಪ್ರದೇಶದಲ್ಲಿ ಈ ತನಕ ಆಹಾರ ಕಿಟ್ ಸಿಗದೆ ಇರುವ 19 ಕುಟುಂಬಗಳಿಗೆ ಹಾಗೂ ಇತರ 1 ಕುಟುಂಬಕ್ಕೆ ಅಗತ್ಯ ವಸ್ತುಗಳಿರುವ ಕಿಟ್ ವಿತರಿಸಲಾಯಿತು.

ಮನೆ ಮನೆಗೆ ಕಿಟ್ ವಿತರಣೆಗೆ ಚಾಲನೆ ನೀಡಿದ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಮಾತನಾಡಿ, ಜಾತಿ,‌ ಮತ, ಪಕ್ಷದ ಬೇಧಭಾವ ಇಲ್ಲದೆ ಸೇವಾ ಮನೋಭಾವದ ಪರಿಕಲ್ಪನೆಯೊಂದಿಗೆ ಹುಟ್ಟಿಕೊಂಡ ನೇಸರ ಯುವಕ ಮಂಡಲ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಸಮಾಜಮುಖಿ ಚಿಂತನೆ ಪೂರಕವಾಗಿ ಈಗಾಗಲೇ ಹತ್ತಾರು ಚಟುವಟಿಕೆಗಳನ್ನು ಹಮ್ಮಿಕೊಂಡಿದೆ.ಸಮಾಜಪರ ಕಾರ್ಯಗಳಿಗೆ ಸದಾ ಬೆಂಬಲ ‌ನೀಡುವ ಈ ಊರಿನ ದಾನಿಗಳ‌ ಸಹಯೋಗದೊಂದಿಗೆ ಕೊರೊನಾ ಕಷ್ಟಕಾಲದಲ್ಲಿ ಮೊದಲ ಹಂತದಲ್ಲಿ 10 ಮತ್ತು ಎರಡನೇ ಹಂತದಲ್ಲಿ 20 ಕುಟುಂಬಗಳಿಗೆ ಸೇರಿದಂತೆ ಒಟ್ಟು 30 ಮನೆಗಳಿಗೆ ಕಿಟ್ ವಿತರಿಸಿದ್ದೇವೆ ಎಂದರು.

ಈ ಸಂದರ್ಭದಲ್ಲಿ ದಾನಿಗಳಾದ ಯತೀಶ್ ಕಾನಾವು ಜಾಲು, ಗೋಪಾಲಕೃಷ್ಣ ಭಟ್ ಕಾನಾವು, ರಾಧಾಕೃಷ್ಣ ರೈ ಕನ್ನೆಜಾಲು, ಮಹೇಶ್ ಕುಂಡಡ್ಕ, ರಾಮಚಂದ್ರ ಕೋಡಿಬೈಲು, ಜಯಪ್ರಕಾಶ್ ರೈ ಕನ್ನೆಜಾಲು, ಕುಂಬ್ರ ದಯಾಕರ ಆಳ್ವ, ನಿವೃತ್ತ ಶಿಕ್ಷಕ ಬಾಬು ಎನ್, ಗೋಪಾಲಕೃಷ್ಣ ಭಟ್ ಮನವಳಿಕೆ, ರಾಮಚಂದ್ರ ಬರೆಪ್ಪಾಡಿ, ಕುಸುಮಾಧರ ಪೂಜಾರಿ ಅಡ್ಯತಕಂಡ, ಪ್ರಸಾದ್ ಎನ್ ಕುಂಡಡ್ಕ, ರಮೇಶ್ ಪೂಜಾರಿ ಮುಕ್ಕೂರು, ನೇಸರ ಯುವಕ ಮಂಡಲ ಅಧ್ಯಕ್ಷ ರಮೇಶ್ ಕಾನಾವು, ಕಾರ್ಯದರ್ಶಿ ಶಶಿಕುಮಾರ್ ಬಿ.ಎನ್., ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ಕಾರ್ಯದರ್ಶಿ ರಕ್ಷಿತ್ ಗೌಡ ಒರುಂಕು ಮೊದಲಾದವರು ಸಹಕರಿಸಿದರು.

20 ಕುಟುಂಬಕ್ಕೆ ಆಹಾರ್ ಸಾಮಾಗ್ರಿ ವಿತರಣೆ: 

ಪ್ರತಿ ಕುಟುಂಬಕ್ಕೆ ಹಾಲು, ಸಕ್ಕರೆ, ಚಾ ಹುಡಿ, ಅವಲಕ್ಕಿ, ಕೆಂಪು ಕಡಲೆ, ಕುಮ್ಟೆ ಮೆಣಸು, ಈರುಳ್ಳಿ, ಟೊಮ್ಯಾಟೊ, ಬಟಾಟೆ, ಉಪ್ಪು, ಸಾಬೂನು ಸೇರಿದಂತೆ 12 ವಸ್ತುಗಳು ಇರುವ ಕಿಟ್ ಅನ್ನು‌ ಒಟ್ಟು 20 ಕುಟುಂಬಗಳಿಗೆ ವಿತರಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

9 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

10 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

19 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

23 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago