ಬೆಳ್ಳಾರೆ: ಕಳೆದ ಎರಡು ದಿನಗಳಿಂದ ಮಳೆಯಬ್ಬರ ಹೆಚ್ಚಾಗಿದೆ. ಸೋಮವಾರ ಮುಂಜಾನೆಯಿಂದ ಸುರಿದ ಭಾರಿ ಮಳೆಗೆ ಮುಕ್ಕೂರು ಭಾಗದ ಮಾಪಳ ಮಜಲು ಹೊಳೆಯಲ್ಲಿ ಭಾರಿ ಪ್ರಮಾಣದ ನೀರಿನ ಹರಿವು ಉಂಟಾಗಿದ್ದು ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಸುತ್ತ ಮುತ್ತಲಿನ ಕೃಷಿಕರ ತೋಟಗಳೂ ಜಲಾವೃತ್ತಗೊಂಡಿದ್ದು ಬೆಳೆ ನಾಶವೂ ಆಗಿದೆ.ಹೊಳೆಯ ಆಳದಲ್ಲಿ ಕೆಸರು ತುಂಬಿದ್ದು ಅದನ್ನು ತೆಗೆಯುವ ಕಾರ್ಯ ಅಸಮರ್ಪಕವಾಗಿ ನಡೆದುದರಿಂದ ರಸ್ತೆಯ ಮೇಲೆ ನೀರು ಹರಿಯಲು ಕಾರಣ ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಇದೇ ವೇಳೆ ತಾಲೂಕಿನಲ್ಲೂ ಉತ್ತಮವಾದ ಮಳೆಯಾದ ವರದಿಯಾಗಿದೆ. ಕೃಷಿಕರು ಸಂಗ್ರಹಿಸಿದ ಮಳೆ ಲೆಕ್ಕದ ಪ್ರಕಾರ ಸೋಮವಾರ ಬೆಳಗ್ಗೆ ಬಾಳಿಲದಲ್ಲಿ 158 ಮಿಮೀ , ಗುತ್ತಿಗಾರಿನಲ್ಲಿ 113 ಮಿಮೀ , ಕಲ್ಲಾಜೆಯಲ್ಲಿ 135 ಮಿಮೀ , ಕೊಲ್ಲಮೊಗ್ರದಲ್ಲಿ 107 ಮಿಮೀ ಮಳೆಯಾಗಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…