ಬೆಳ್ಳಾರೆ: ಕಳೆದ ಎರಡು ದಿನಗಳಿಂದ ಮಳೆಯಬ್ಬರ ಹೆಚ್ಚಾಗಿದೆ. ಸೋಮವಾರ ಮುಂಜಾನೆಯಿಂದ ಸುರಿದ ಭಾರಿ ಮಳೆಗೆ ಮುಕ್ಕೂರು ಭಾಗದ ಮಾಪಳ ಮಜಲು ಹೊಳೆಯಲ್ಲಿ ಭಾರಿ ಪ್ರಮಾಣದ ನೀರಿನ ಹರಿವು ಉಂಟಾಗಿದ್ದು ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಸುತ್ತ ಮುತ್ತಲಿನ ಕೃಷಿಕರ ತೋಟಗಳೂ ಜಲಾವೃತ್ತಗೊಂಡಿದ್ದು ಬೆಳೆ ನಾಶವೂ ಆಗಿದೆ.ಹೊಳೆಯ ಆಳದಲ್ಲಿ ಕೆಸರು ತುಂಬಿದ್ದು ಅದನ್ನು ತೆಗೆಯುವ ಕಾರ್ಯ ಅಸಮರ್ಪಕವಾಗಿ ನಡೆದುದರಿಂದ ರಸ್ತೆಯ ಮೇಲೆ ನೀರು ಹರಿಯಲು ಕಾರಣ ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಇದೇ ವೇಳೆ ತಾಲೂಕಿನಲ್ಲೂ ಉತ್ತಮವಾದ ಮಳೆಯಾದ ವರದಿಯಾಗಿದೆ. ಕೃಷಿಕರು ಸಂಗ್ರಹಿಸಿದ ಮಳೆ ಲೆಕ್ಕದ ಪ್ರಕಾರ ಸೋಮವಾರ ಬೆಳಗ್ಗೆ ಬಾಳಿಲದಲ್ಲಿ 158 ಮಿಮೀ , ಗುತ್ತಿಗಾರಿನಲ್ಲಿ 113 ಮಿಮೀ , ಕಲ್ಲಾಜೆಯಲ್ಲಿ 135 ಮಿಮೀ , ಕೊಲ್ಲಮೊಗ್ರದಲ್ಲಿ 107 ಮಿಮೀ ಮಳೆಯಾಗಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…