ಬೆಳ್ಳಾರೆ: ಕಳೆದ ಎರಡು ದಿನಗಳಿಂದ ಮಳೆಯಬ್ಬರ ಹೆಚ್ಚಾಗಿದೆ. ಸೋಮವಾರ ಮುಂಜಾನೆಯಿಂದ ಸುರಿದ ಭಾರಿ ಮಳೆಗೆ ಮುಕ್ಕೂರು ಭಾಗದ ಮಾಪಳ ಮಜಲು ಹೊಳೆಯಲ್ಲಿ ಭಾರಿ ಪ್ರಮಾಣದ ನೀರಿನ ಹರಿವು ಉಂಟಾಗಿದ್ದು ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಸುತ್ತ ಮುತ್ತಲಿನ ಕೃಷಿಕರ ತೋಟಗಳೂ ಜಲಾವೃತ್ತಗೊಂಡಿದ್ದು ಬೆಳೆ ನಾಶವೂ ಆಗಿದೆ.ಹೊಳೆಯ ಆಳದಲ್ಲಿ ಕೆಸರು ತುಂಬಿದ್ದು ಅದನ್ನು ತೆಗೆಯುವ ಕಾರ್ಯ ಅಸಮರ್ಪಕವಾಗಿ ನಡೆದುದರಿಂದ ರಸ್ತೆಯ ಮೇಲೆ ನೀರು ಹರಿಯಲು ಕಾರಣ ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಇದೇ ವೇಳೆ ತಾಲೂಕಿನಲ್ಲೂ ಉತ್ತಮವಾದ ಮಳೆಯಾದ ವರದಿಯಾಗಿದೆ. ಕೃಷಿಕರು ಸಂಗ್ರಹಿಸಿದ ಮಳೆ ಲೆಕ್ಕದ ಪ್ರಕಾರ ಸೋಮವಾರ ಬೆಳಗ್ಗೆ ಬಾಳಿಲದಲ್ಲಿ 158 ಮಿಮೀ , ಗುತ್ತಿಗಾರಿನಲ್ಲಿ 113 ಮಿಮೀ , ಕಲ್ಲಾಜೆಯಲ್ಲಿ 135 ಮಿಮೀ , ಕೊಲ್ಲಮೊಗ್ರದಲ್ಲಿ 107 ಮಿಮೀ ಮಳೆಯಾಗಿದೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…