ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿದೆಡೆ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಶನಿವಾರ ಕೂಡಾ ಮಳೆಯಾಗುವ ಸಾಧ್ಯತೆ ಇದೆ.
ಶುಕ್ರವಾರ ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ 35 ಮಿಮೀ ಮಳೆಯಾದರೆ ಗುತ್ತಿಗಾರಿನಲ್ಲಿ 20 ಮಿಮೀ , ಕಲ್ಲಾಜೆಯಲ್ಲಿ 53 ಮಿಮೀ ಮಳೆಯಾಗಿತ್ತು. ಉಳಿದಂತೆ ಹಲವು ಕಡೆಗಳಲ್ಲಿ ತುಂತುರು ಮಳೆಯಾಗಿತ್ತು. ಶನಿವಾರ ಕೂಡಾ ಮೋಡ ಕವಿದ ವಾತಾವರಣ ಇದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ವಿವಿಧ ಕಡೆ ಶುಕ್ರವಾರ ಮಳೆಯಾಗಿದೆ. ಉತ್ತರ ಕರ್ನಾಟಕದ ವಿಜಯಪುರ, ಕಲಬುರ್ಗಿ, ಬಾಗಲಕೋಟೆ, ಗದಗ, ಧಾರವಾಡ ಮೊದಲಾದೆಡೆ ಧಾರಾಕಾರವಾಗಿ ಆಲಿಕಲ್ಲು ಮಳೆಗಳಾಗಿವೆ. ಗುಡುಗು – ಸಿಡಿಲಿನ ಅಬ್ಬರಕ್ಕೆ ಹಸುಗಳು ಸಾವನ್ನಪ್ಪಿದ ಘಟನೆಯೂ ನಡೆದಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel