ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿದೆಡೆ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಶನಿವಾರ ಕೂಡಾ ಮಳೆಯಾಗುವ ಸಾಧ್ಯತೆ ಇದೆ.
ಶುಕ್ರವಾರ ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ 35 ಮಿಮೀ ಮಳೆಯಾದರೆ ಗುತ್ತಿಗಾರಿನಲ್ಲಿ 20 ಮಿಮೀ , ಕಲ್ಲಾಜೆಯಲ್ಲಿ 53 ಮಿಮೀ ಮಳೆಯಾಗಿತ್ತು. ಉಳಿದಂತೆ ಹಲವು ಕಡೆಗಳಲ್ಲಿ ತುಂತುರು ಮಳೆಯಾಗಿತ್ತು. ಶನಿವಾರ ಕೂಡಾ ಮೋಡ ಕವಿದ ವಾತಾವರಣ ಇದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ವಿವಿಧ ಕಡೆ ಶುಕ್ರವಾರ ಮಳೆಯಾಗಿದೆ. ಉತ್ತರ ಕರ್ನಾಟಕದ ವಿಜಯಪುರ, ಕಲಬುರ್ಗಿ, ಬಾಗಲಕೋಟೆ, ಗದಗ, ಧಾರವಾಡ ಮೊದಲಾದೆಡೆ ಧಾರಾಕಾರವಾಗಿ ಆಲಿಕಲ್ಲು ಮಳೆಗಳಾಗಿವೆ. ಗುಡುಗು – ಸಿಡಿಲಿನ ಅಬ್ಬರಕ್ಕೆ ಹಸುಗಳು ಸಾವನ್ನಪ್ಪಿದ ಘಟನೆಯೂ ನಡೆದಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…