ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿದೆಡೆ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಶನಿವಾರ ಕೂಡಾ ಮಳೆಯಾಗುವ ಸಾಧ್ಯತೆ ಇದೆ.
ಶುಕ್ರವಾರ ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ 35 ಮಿಮೀ ಮಳೆಯಾದರೆ ಗುತ್ತಿಗಾರಿನಲ್ಲಿ 20 ಮಿಮೀ , ಕಲ್ಲಾಜೆಯಲ್ಲಿ 53 ಮಿಮೀ ಮಳೆಯಾಗಿತ್ತು. ಉಳಿದಂತೆ ಹಲವು ಕಡೆಗಳಲ್ಲಿ ತುಂತುರು ಮಳೆಯಾಗಿತ್ತು. ಶನಿವಾರ ಕೂಡಾ ಮೋಡ ಕವಿದ ವಾತಾವರಣ ಇದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ವಿವಿಧ ಕಡೆ ಶುಕ್ರವಾರ ಮಳೆಯಾಗಿದೆ. ಉತ್ತರ ಕರ್ನಾಟಕದ ವಿಜಯಪುರ, ಕಲಬುರ್ಗಿ, ಬಾಗಲಕೋಟೆ, ಗದಗ, ಧಾರವಾಡ ಮೊದಲಾದೆಡೆ ಧಾರಾಕಾರವಾಗಿ ಆಲಿಕಲ್ಲು ಮಳೆಗಳಾಗಿವೆ. ಗುಡುಗು – ಸಿಡಿಲಿನ ಅಬ್ಬರಕ್ಕೆ ಹಸುಗಳು ಸಾವನ್ನಪ್ಪಿದ ಘಟನೆಯೂ ನಡೆದಿದೆ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…