Advertisement
ಸುದ್ದಿಗಳು

ಎಲಿಮಲೆಯಲ್ಲಿ ನಡೆದ ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ

Share

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಎಲಿಮಲೆ ಸರ್ಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಎಲಿಮಲೆ ಸರ್ಕಾರಿ ಪ್ರೌಢಶಾಲಾ ವಠಾರದಲ್ಲಿ ಭಾನುವಾರ ನಡೆದ ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಶಾಸಕ ಎಸ್.ಅಂಗಾರ ಬಿಡುಗಡೆ ಮಾಡಿದರು.

ಸಾಹಿತಿ ಕೃಷ್ಣಶಾಸ್ತ್ರಿ ಮರ್ಕಂಜ(ಕೃ.ಶಾ.ಮರ್ಕಂಜ) ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಾಹಿತಿ, ಪತ್ರಕರ್ತ ಗಿರೀಶ್ ರಾವ್ ಹತ್ವಾರ್ (ಜೋಗಿ), ಜಿ.ಪಂ.ಸದಸ್ಯೆ ಆಶಾ ತಿಮ್ಮಪ್ಪ ಹೊಸ ಕೃತಿಗಳನ್ನು ಬಿಡುಗಡೆ ಮಾಡಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮುಖ್ಯ ಅತಿಥಿಯಾಗಿದ್ದರು. ದ.ಕ. ಜಿಲ್ಲಾ ಕ.ಸಾ.ಪ ಅಧ್ಯಕ್ಷ ಪ್ರದೀಪ್‍ಕುಮಾರ್ ಕಲ್ಕೂರ ಪರಿಷತ್‍ನ ಧ್ವಜಾರೋಹಣ ನೆರವೇರಿಸಿ ಸಮ್ಮೇಳನದ ಆಶಯ ಭಾಷಣ ಮಾಡಿದರು. ನಿಕಟಪೂರ್ವ ಸಮ್ಮೇಳನಾಧ್ಯಕ್ಷೆ ಲಲಿತಾಜ ಮಲ್ಲಾರ ಮಾತನಾಡಿದರು. ವಸ್ತು ಪ್ರದರ್ಶನ ಮತ್ತು ಪುಸ್ತಕ ಪ್ರದರ್ಶನವನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು.

ತಾ.ಪಂ.ಸದಸ್ಯೆ ಯಶೋದಾ ಬಾಳೆಗುಡ್ಡೆ ಕನ್ನಡ ಭುವನೇಶ್ವರಿಯ ಮೆರವಣಿಗೆಗೆ ಚಾಲನೆ ನೀಡಿದರು. ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ದಿವಾಕರ ಮುಂಡೋಡಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಸುಳ್ಯ ತಾಲೂಕು ಕ.ಸಾ.ಪ. ಅಧ್ಯಕ್ಷ ಹರಪ್ರಸಾದ್ ತುದಿಯಡ್ಕ ಕನ್ನಡ ಧ್ವಜಾರೋಹಣ ನೆರವೇರಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಎ.ವಿ.ತೀರ್ಥರಾಮ ಸ್ವಾಗತಿಸಿದರು, ಸಾಹಿತ್ಯ ಪರಿಷತ್‍ನ ಗೌರವ ಕಾರ್ಯದರ್ಶಿ ಚಂದ್ರಶೇಖರ ಪೇರಾಲು ಸ್ಮರಣ ಸಂಚಿಕೆ ಕುರಿತು ಮಾತನಾಡಿದರು, ಗೋಪಿನಾಥ್ ಮೆತ್ತಡ್ಕ ಸಮ್ಮೇಳನಾಧ್ಯಕ್ಷರ ಪರಿಚಯ ಮಾಡಿದರು, ರಮ್ಯಾ ದಿಲೀಪ್ ಆಶಯ ಗೀತೆ, ಎಲಿಮಲೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಮತ್ತು ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ರೈತ ಗೀತೆ ಹಾಡಿದರು. ಕಸಾಪ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ ವಂದಿಸಿದರು. ಉಪನ್ಯಾಸಕಿ ಬೇಬಿ ವಿದ್ಯಾ ಕಾರ್ಯಕ್ರಮ ನಿರೂಪಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

22 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago