ಎಲಿಮಲೆ: ಎಲಿಮಲೆಯ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಜ್ಞಾನದೀಪ ಯಕ್ಷಗಾನ ಕಲಾ ತಂಡದ ಉದ್ಘಾಟನೆ ಹಾಗೂ ತರಬೇತಿ ಕಾರ್ಯಕ್ರಮ ಶನಿವಾರ ಉದ್ಘಾಟನೆಗೊಂಡಿತು.
ಕಾರ್ಯಕ್ರಮವನ್ನು ಮರ್ಕಂಜ ಪಂಚಸ್ಥಾಪನೆ ದೇವಸ್ಥಾನದ ಮಾಜಿ ಮೊಕ್ತೇಸರ ಹಾಗೂ ಹಿರಿಯ ಯಕ್ಷಗಾನ ಕಲಾವಿದ ಯುವರಾಜ ಜೈನ್ ಉದ್ಘಾಟಿಸಿದರು. ಯಕ್ಷಗಾನ ಗುರುಗಳಾದ ಶೇಖರ ಮಣಿಯಾಣಿ ಸುಳ್ಯ ಸ್ವರಚಿತ ಹಾಡಿನ ಮೂಲಕ ಯಕ್ಷಗಾನ ತರಬೇತಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಸಭಾಧ್ಯಕ್ಷತೆ ವಹಿಸಿದ್ದ ಜ್ಞಾನದೀಪ ವಿದ್ಯಾಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ತಳೂರು, ಯಕ್ಷಗಾನವು ನಮ್ಮ ಕರಾವಳಿಯ ಪ್ರಸಿದ್ಧ ಕಲೆಗಳಲ್ಲಿ ಒಂದು. ಇದನ್ನು ಉಳಿಸಿ ಬೆಳೆಸಲು ಇಂದಿನ ಮಕ್ಕಳಿಗೆ ಇದರ ಕಲಿಕೆ ಅಗತ್ಯ ಎಂದರು.
ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ನಿರ್ದೇಶಕರುಗಳಾದ ರಾಧಾಕೃಷ್ಣ ಮಾವಿನಕಟ್ಟೆ, ಮಹಾವೀರ ಜೈನ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಭಾಸ್ಕರ ರಾವ್ ಉಬರಡ್ಕ, ಶಾಲಾ ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು, ಪ್ರಾಥಮಿಕ ವಿಭಾಗದ ಮಖ್ಯೋಪಾಧ್ಯಾಯ ಪುನೀತ್ ರವಿ , ಯಕ್ಷಗುರು ರಾಧಾಕೃಷ್ನ ಕಲ್ಲುಗುಂಡಿ ಉಪಸ್ಥಿತರಿದ್ದರು
ಶಾಲಾ ಶಿಕ್ಷಕಿಯರಾದ ಹರ್ಷಿತಾ ಸ್ವಾಗತಿಸಿ, ಶ್ರೀಮತಿ ಭಾರತಿ ವಂದಿಸಿದರು. ಶ್ರೀಮತಿ ಪವಿತ್ರಾ ಕಾರ್ಯಕ್ರಮ ನಿರೂಪಿಸಿದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…