ಎಲಿಮಲೆ: ಎಲಿಮಲೆ ಜ್ಞಾನದೀಪ ಶಾಲಾ ಪ್ರವೇಶೋತ್ಸವ ವಿಶಿಷ್ಟ ರೀತಿಯಲ್ಲಿ ನಡೆಯಿತು. ಮಕ್ಕಳಿಗೆ ಆರತಿ ಬೆಳಗಿ ತಿಲಕವಿರಿಸಿ ಮಕ್ಕಳಿಗೆ ಸ್ವಾಗತ ಮಾಡಿದ ಬಳಿಕ ಮಕ್ಕಳು ಪೋಷಕರ ಕಾಲು ಮುಟ್ಟಿ ನಮಸ್ಕರಿಸಿದರು. ನಂತರ ಭಾರತಮಾತೆಗೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮ ನಡೆಯಿತು.
ಪ್ರತೀ ಬಾರಿ ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ಈ ವರ್ಷದ ಪ್ರವೇಶೋತ್ಸವ ಸಮಾರಂಭವು ವೈಶಿಷ್ಟ್ಯದಿಂದ ನಡೆಯುತ್ತದೆ. ಕಿರಿಯ ವಿದ್ಯಾರ್ಥಿಗಳನ್ನು ಹಿರಿಯ ವಿದ್ಯಾರ್ಥಿಗಳು ಆರತಿ ಎತ್ತಿ , ತಿಲಕವಿಟ್ಟು ಸ್ವಾಗತಿಸಿದರು. ಮಕ್ಕಳು ಪೋಷಕರ ಕಾಲು ಮುಟ್ಟಿ ನಮಸ್ಕರಿಸಿದಾಗ ಪೋಷಕರು ಅಕ್ಷತೆ ಕಾಳು ಹಾಕಿ ಆಶೀರ್ವದಿಸಿದರು.ಬಳಿಕ ಮಕ್ಕಳು ಹಾಗೂ ಪೋಷಕರು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಿದರು.
ಬಳಿಕ ಪೋಷಕರ ಹಾಗೂ ಆಡಳಿತ ಮಂಡಳಿ ಸಭೆ ನಡೆಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಶೇಖರ ತಳೂರು, ಸಂಚಾಲಕ ಎ.ವಿ.ತೀರ್ಥರಾಮ, ನಿರ್ದೇಶಕ ರಾಧಾಕೃಷ್ಣ ಮಾವಿನಕಟ್ಟೆ, ಗಂಗಾಧರ ಕೇಪಳಕಜೆ, ಕೃಷ್ಣಯ್ಯ ಮೂಲೆತೋಟ, ಸೂರ್ಯನಾರಾಯಣ ಭಟ್ ಮೂಲೆತೋಟ, ಶ್ರೀಕೃಷ್ಣ ಭಟ್ ಗುಂಡಿಮಜಲು, ಮಹಾವೀರ ಜೈನ್, ಶಾಲಾ ಮುಖ್ಯೋಪಾಧ್ಯಾಯ ಗದಾಧರ ಬಾಳುಗೋಡು, ಶಿಕ್ಷಕ ರಕ್ಷಕ ಸಂಘದ ಜಯಂತ ಅಂಬೆಕಲ್ಲು, ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು ಮೊದಲಾದವರು ಉಪಸ್ಥಿತರಿದ್ದರು.
ಸಭೆಯಲ್ಲಿ ಅಧಿಕ ಅಂಕ ಪಡೆದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಪ್ರವೇಶೋತ್ಸವಕ್ಕೂ ಮುನ್ನ ಶಾಲೆಯಲ್ಲಿ ಗಣಪತಿ ಹವನ ನಡೆಯಿತು.
ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…
ಕಸ್ಟಮ್ಸ್ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…