ಎಲಿಮಲೆ ಜ್ಞಾನದೀಪ ಶಾಲೆಯಲ್ಲಿ ಸಾಹಸ ಪ್ರದರ್ಶನದ ವಾರ್ಷಿಕೋತ್ಸವ

January 5, 2020
1:02 PM

ಎಲಿಮಲೆ: ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕೋತ್ಸವ ಸಮಾರಂಭವು ಶನಿವಾರ ವಿಜೃಂಭಣೆಯಿಂದ ನಡೆಯಿತು.

Advertisement
Advertisement

ಈ ಸಂದರ್ಭ ನೂತನ ಪಾಕಶಾಲಾ ಕೊಠಡಿಯನ್ನು ರಾಜ್ಯಸಭಾ ಸದಸ್ಯರಾದ ನಿವೃತ್ತ ಐಪಿಎಸ್ ಕೆ.ಸಿ.ರಾಮಮೂರ್ತಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ಇರುವ ಈ ಸಂಸ್ಥೆಯು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡುತ್ತಿದೆ. ನಗರ ಪ್ರದೇಶಕ್ಕಿಂತ ಭಿನ್ನವಾದ ಶಿಕ್ಷಣದ ಜೊತೆಗೆ ಮಕ್ಕಳಿಗೆ ಎಲ್ಲಾ ರೀತಿಯ ಶಿಕ್ಷಣ ಒದಗಿಸುತ್ತಿರುವುದು ಶ್ಲಾಘನೀಯ ಎಂದರು.

Advertisement

ಸಭಾ ಕಾರ್ಯಕ್ರಮವನ್ನು ಕುಕ್ಕೆಶ್ರೀ ಸುಬ್ರಹ್ಮಣ್ಯದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿಯವರು ಉದ್ಘಾಟಿಸಿದರು.

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್. ಅಂಗಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Advertisement

ವೇದಿಕೆಯಲ್ಲಿ ರಾಜ್ಯ ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿ  ಲೋಕೇಶ್ ಅಂಬೆಕಲ್ಲು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಪ್ರಚಾರಕ ಜಯರಾಮ ಬೊಳ್ಳಾಜೆ ಅತಿಥಿಗಳಾಗಿ ಉಪಸ್ಥಿತರಿದ್ದರು.

Advertisement

ಶಾಲಾ ಸಂಚಾಲಕ ಎ.ವಿ. ತೀರ್ಥರಾಮ ಸ್ವಾಗತಿಸಿ ಪ್ರಸ್ತಾವನೆಗೈದರು. ಶಾಲಾ ಮುಖ್ಯಶಿಕ್ಷಕ ಗದಾಧರ ಬಾಳುಗೋಡು ವರದಿ ವಾಚಿಸಿದರು. ಕೃಷ್ಣಯ್ಯ ಮೂಲೆತೋಟ ವಂದಿಸಿದರು. ಶಾಲಾ ಶಿಕ್ಷಕಿಯರಾದ ಶಾಲಿನಿ ಮತ್ತು ಸುಮಾಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ವೇದಿಕೆಯಲ್ಲಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ಭಟ್ ತಳೂರು, ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಭಾಸ್ಕರ್ ರಾವ್, ವಿದ್ಯಾರ್ಥಿ ನಾಯಕಿ ಅಖಿಲಾ ಎಂ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿಶ್ಚಿತ್ ಕೇಪಳಕಜೆ, ಆಡಳಿತ ಮಂಡಳಿ ನಿರ್ದೇಶಕರಾದ ರಾಧಾಕೃಷ್ಣ ಕೆ.ಆರ್ ಮಾವಿನಕಟ್ಟೆ, ಗಂಗಾಧರ ಕೇಪಳಕಜೆ, ಸದಸ್ಯರಾದ ಜಯಂತ್ ಅಂಬೆಕಲ್ಲು, ಸೂರ್ಯನಾರಾಯಣ ಭಟ್ ಮೂಲೆತೋಟ, ಮೋಹನ್ ರಾಂ ಸುಳ್ಳಿ, ಶ್ರೀಕೃಷ್ಣ ಭಟ್ ಗುಂಡಿಮಜಲು, ಮಹಾವೀರ್ ಜೈನ್, ಡಿ.ಟಿ.ದಯಾನಂದ ಉಪಸ್ಥಿತರಿದ್ದರು.

Advertisement

ಶಾಲೆಯ ಕ್ರೀಡಾ ಶಿಕ್ಷಕಿ ದಿವ್ಯ ಬಾಳುಗೋಡು ಅವರ ಕ್ರೀಡಾ ಸಾಧನೆಗೆ ಸನ್ಮಾನಿಸಲಾಯಿತು. ಸಾಧನೆಗೈದ ವಿದ್ಯಾರ್ಥಿಗಳನ್ನು, ಹಿರಿಯ ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

Advertisement

ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಹೊನಲು ಬೆಳಕಿನ ಸಾಹಸ, ನೃತ್ಯ, ಕರಾಟೆ, ಯೋಗಾಸನ, ಬಯಲು ರಂಗ ಪ್ರದರ್ಶನ ನಡೆಯಿತು.

Advertisement

Advertisement

Advertisement

Advertisement

Advertisement

 

Advertisement

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ
May 16, 2024
5:58 PM
by: The Rural Mirror ಸುದ್ದಿಜಾಲ
ವಳಲಂಬೆಯಲ್ಲಿ ಯಕ್ಷಗಾನ | ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್ ಶೆಟ್ಟಿಯವರಿಗೆ ಗೌರವಾರ್ಪಣೆ | ಕಲಾವಿದರನ್ನು ಗೌರವಿಸುವುದು ಉತ್ತಮ ಕೆಲಸ -ಹರೀಶ್ ಬಳಂತಿಮೊಗರು |
May 14, 2024
10:05 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ
May 12, 2024
11:34 AM
by: The Rural Mirror ಸುದ್ದಿಜಾಲ
ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |
May 10, 2024
1:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror