Advertisement
ಕಲೆ-ಸಂಸ್ಕೃತಿ

ಎಲಿಮಲೆ ಜ್ಞಾನದೀಪ ಶಾಲೆಯಲ್ಲಿ ಸಾಹಸ ಪ್ರದರ್ಶನದ ವಾರ್ಷಿಕೋತ್ಸವ

Share

ಎಲಿಮಲೆ: ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕೋತ್ಸವ ಸಮಾರಂಭವು ಶನಿವಾರ ವಿಜೃಂಭಣೆಯಿಂದ ನಡೆಯಿತು.

Advertisement

ಈ ಸಂದರ್ಭ ನೂತನ ಪಾಕಶಾಲಾ ಕೊಠಡಿಯನ್ನು ರಾಜ್ಯಸಭಾ ಸದಸ್ಯರಾದ ನಿವೃತ್ತ ಐಪಿಎಸ್ ಕೆ.ಸಿ.ರಾಮಮೂರ್ತಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ಇರುವ ಈ ಸಂಸ್ಥೆಯು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡುತ್ತಿದೆ. ನಗರ ಪ್ರದೇಶಕ್ಕಿಂತ ಭಿನ್ನವಾದ ಶಿಕ್ಷಣದ ಜೊತೆಗೆ ಮಕ್ಕಳಿಗೆ ಎಲ್ಲಾ ರೀತಿಯ ಶಿಕ್ಷಣ ಒದಗಿಸುತ್ತಿರುವುದು ಶ್ಲಾಘನೀಯ ಎಂದರು.

ಸಭಾ ಕಾರ್ಯಕ್ರಮವನ್ನು ಕುಕ್ಕೆಶ್ರೀ ಸುಬ್ರಹ್ಮಣ್ಯದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿಯವರು ಉದ್ಘಾಟಿಸಿದರು.

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್. ಅಂಗಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ರಾಜ್ಯ ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿ  ಲೋಕೇಶ್ ಅಂಬೆಕಲ್ಲು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಪ್ರಚಾರಕ ಜಯರಾಮ ಬೊಳ್ಳಾಜೆ ಅತಿಥಿಗಳಾಗಿ ಉಪಸ್ಥಿತರಿದ್ದರು.

ಶಾಲಾ ಸಂಚಾಲಕ ಎ.ವಿ. ತೀರ್ಥರಾಮ ಸ್ವಾಗತಿಸಿ ಪ್ರಸ್ತಾವನೆಗೈದರು. ಶಾಲಾ ಮುಖ್ಯಶಿಕ್ಷಕ ಗದಾಧರ ಬಾಳುಗೋಡು ವರದಿ ವಾಚಿಸಿದರು. ಕೃಷ್ಣಯ್ಯ ಮೂಲೆತೋಟ ವಂದಿಸಿದರು. ಶಾಲಾ ಶಿಕ್ಷಕಿಯರಾದ ಶಾಲಿನಿ ಮತ್ತು ಸುಮಾಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ವೇದಿಕೆಯಲ್ಲಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ಭಟ್ ತಳೂರು, ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಭಾಸ್ಕರ್ ರಾವ್, ವಿದ್ಯಾರ್ಥಿ ನಾಯಕಿ ಅಖಿಲಾ ಎಂ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿಶ್ಚಿತ್ ಕೇಪಳಕಜೆ, ಆಡಳಿತ ಮಂಡಳಿ ನಿರ್ದೇಶಕರಾದ ರಾಧಾಕೃಷ್ಣ ಕೆ.ಆರ್ ಮಾವಿನಕಟ್ಟೆ, ಗಂಗಾಧರ ಕೇಪಳಕಜೆ, ಸದಸ್ಯರಾದ ಜಯಂತ್ ಅಂಬೆಕಲ್ಲು, ಸೂರ್ಯನಾರಾಯಣ ಭಟ್ ಮೂಲೆತೋಟ, ಮೋಹನ್ ರಾಂ ಸುಳ್ಳಿ, ಶ್ರೀಕೃಷ್ಣ ಭಟ್ ಗುಂಡಿಮಜಲು, ಮಹಾವೀರ್ ಜೈನ್, ಡಿ.ಟಿ.ದಯಾನಂದ ಉಪಸ್ಥಿತರಿದ್ದರು.

ಶಾಲೆಯ ಕ್ರೀಡಾ ಶಿಕ್ಷಕಿ ದಿವ್ಯ ಬಾಳುಗೋಡು ಅವರ ಕ್ರೀಡಾ ಸಾಧನೆಗೆ ಸನ್ಮಾನಿಸಲಾಯಿತು. ಸಾಧನೆಗೈದ ವಿದ್ಯಾರ್ಥಿಗಳನ್ನು, ಹಿರಿಯ ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಹೊನಲು ಬೆಳಕಿನ ಸಾಹಸ, ನೃತ್ಯ, ಕರಾಟೆ, ಯೋಗಾಸನ, ಬಯಲು ರಂಗ ಪ್ರದರ್ಶನ ನಡೆಯಿತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

2 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

7 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

7 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

7 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

19 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago