ವಿಶೇಷ ವರದಿಗಳು

ಎಲಿಮಲೆ- ಮರ್ಕಂಜ-ಅರಂತೋಡು ರಸ್ತೆ ಅಗಲೀಕರಣಕ್ಕಾಗಿ 3 ಕೋಟಿ ಪ್ರಸ್ತಾವನೆ ಕಡತದಲ್ಲಿಯೇ ಬಾಕಿ…?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಎಲಿಮಲೆ:  ಹಲವು ವರ್ಷಗಳಿಂದ ಅಭಿವೃದ್ಧಿಗಾಗಿ ಕಾಯುತ್ತಿರುವ ಮಡಿಕೇರಿ, ಮೈಸೂರು ಭಾಗಗಳಿಗೆ ನೇರ ಸಂಪರ್ಕ ಕಲ್ಪಿಸುವ ಎಲಿಮಲೆ-ಮರ್ಕಂಜ-ಅರಂತೋಡು ರಸ್ತೆಯ ಅಗಲೀಕರಣ ಕಾಮಗಾರಿ ಪ್ರಸ್ತಾವನೆ ಕಡತದಲ್ಲಿಯೇ ಬಾಕಿಯಾಗಿದೆ.

Advertisement

ಪ್ರಸಿದ್ದ ಯಾತ್ರಾಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಯಾತ್ರಾರ್ಥಿಗಳು ಓಡಾಡುತ್ತಾರೆ. ಮಡಿಕೇರಿ, ಮೈಸೂರುಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಅತ್ಯಂತ ಕಡಿದಾಗಿದ್ದು, ಭಾರೀ ವಾಹನಗಳು ಮುಖಾಮುಖಿಯಾದರೆ ದಾರಿ ಬಿಟ್ಟುಕೊಡಲು ಕಷ್ಟವಾಗುತ್ತದೆ. ರಸ್ತೆ ತಿರುವುನಿಂದ ಕೂಡಿದ್ದು, ಎದುರಿನಿಂದ ಬರುವ ವಾಹನಗಳು ಎದುರಾಗಿ ಅಪಘಾತಗಳೂ ಸಂಭವಿಸಿವೆ.

 

 

Advertisement

Advertisement

 

15 ಕಿ.ಮೀ ಉಳಿಕೆ:

ಸುಬ್ರಹ್ಮಣ್ಯಕ್ಕೆ ಹೋಗಲು ಸುಳ್ಯ ಬಳಸಿ ಪ್ರಯಾಣಿಸಿದರೆ ಸುಮಾರು 74 ಕಿ.ಮೀ ಇದ್ದು ಅರಂತೋಡಿನಿಂದ ಅಡ್ತಲೆ ಮರ್ಕಂಜ ಮಾರ್ಗವಾಗಿ ಪ್ರಯಾಣಿಸಿದರೆ ಸುಮಾರು 15 ಕಿಮೀನಷ್ಟು ಉಳಿತಾಯವಾಗುತ್ತದೆ. ಆದ್ದರಿಂದ ಬಹುತೇಕ ಪ್ರವಾಸಿಗರು ಇದೇ ಮಾರ್ಗವನ್ನು ಬಳಸುತ್ತಾರೆ. ಆದರೆ ಇದರಲ್ಲಿ ಪ್ರಯಾಣಿಸುವುದು ಮಾತ್ರ ಬಹಳ ಪ್ರಯಾಸವೇ ಸರಿ.

ಅಗಲೀಕರಣ ಕಡತದಲ್ಲಿಯೇ ಬಾಕಿ:

ಬಹುಪಯೋಗಿ ಎಲಿಮಲೆ- ಮರ್ಕಂಜ -ಅರಂತೋಡು ರಸ್ತೆ ಅಗಲೀಕರಣಕ್ಕೆ ಹಲವು ವರ್ಷಗಳಿಂದ ಬೇಡಿಕೆ ಇದ್ದು 2 ವರ್ಷಗಳ ಹಿಂದೆ ಪ್ರಸ್ತಾವನೆ ನೀಡಲಾಗಿತ್ತು. ಆದರೆ ಅನುದಾನ ಮಂಜೂರುಗೊಳ್ಳದೇ ಪ್ರಸ್ತಾವನೆ ಕಡತದಲ್ಲಿಯೇ ಬಾಕಿಯಾಗಿದೆ. ರಸ್ತೆಯನ್ನು ಎಲಿಮಲೆಯಿಂದ ಮರ್ಕಂಜದವರೆಗೆ 5 ಕಿ.ಮೀನಷ್ಟು ಅಗಲೀಕರಣ ಮಾಡಲು ಈ ಹಿಂದೆ ಸಿಆರ್‍ಏಫ್‍ನಿಂದ 3 ಕೋ.ರೂ ಮಂಜೂರುಗೊಂಡು ಟೆಂಡರ್ ಪ್ರಕ್ರಿಯೆ ಕೂಡಾ ಮುಗಿದಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯಬೇಕಿದ್ದ ಈ ಕಾಮಗಾರಿಯ ಟೆಂಡರ್ ಪಡೆದುಕೊಂಡ ಗುತ್ತಿಗೆದಾರ ನಿಧನ ಹೊಂದಿದ್ದರಿಂದ ಕಾಮಗಾರಿ ಸ್ಥಗಿತಗೊಂಡಿದೆ ಎಂದು ಹೇಳಲಾಗುತ್ತಿದೆ ಇದೀಗ ಕಾಮಗಾರಿ ಮತ್ತೆ ಪ್ರಾರಂಭಿಸಲು ರಿಟೆಂಡರ್ ಮಾಡಬೇಕಿದೆ.

Advertisement

ಸೇವಾಜೆಯಲ್ಲಿ ನಿರ್ಮಾಣವಾಗಲಿದೆ ಹೊಸ ಸೇತುವೆ:

ಅತ್ಯಂತ ಕಡಿದಾಗಿರುವ ಹಳೆಯ ಸೇತುವೆಯನ್ನು ಕೆಡವಿ ಸೇವಾಜೆಯಲ್ಲಿ ನೂತನ ಸೇತುವೆ ನಿರ್ಮಾಣವಾಗಲಿದೆ. ಇದಕ್ಕಗಿ 2.25 ಕೋಟಿ ರೂ.ಗಳ ಪ್ರಸ್ತಾವನೆ ಮಂಜೂರುಗೊಂಡಿದ್ದು ಕಾಮಗಾರಿ ಅತೀ ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂದು ಲೋಕೋಪಯೋಗಿ ಇಂಜಿನಿಯರ್ ಸಣ್ಣೇ ಗೌಡ ತಿಳಿಸಿದ್ದಾರೆ.

 

  • ಕೃಷ್ಣಪ್ರಸಾದ್  ಕೊಲ್ಚಾರ್
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

Published by
ದ ರೂರಲ್ ಮಿರರ್.ಕಾಂ

Recent Posts

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…

4 hours ago

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

11 hours ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

16 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

17 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

2 days ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago